ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಷ್ಣು ಮೃತ ದುರ್ದೈವಿ.
ಇದನ್ನೂ ಓದಿ; ಈ ದಿನ ಆಧಾರ್ ಅಪ್ಡೇಟ್ ಮಾಡಲು ಕೊನೆಯ ದಿನ; ಅಪ್ಡೇಟ್ ಮಾಡುವುದು ಹೇಗೆ? ಇಲ್ಲಿದೆ ಡಿಟೈಲ್ಸ್

ಕಾಫಿ ತೋಟದಲ್ಲಿ ಮಂಗಗಳನ್ನ ಓಡಿಸಲು ಬಳಸುವ ಏರ್ ಗನ್ ಜೊತೆ ವಿಷ್ಣು ಮನೆ ಮುಂದೆ ಆಟವಾಡುತ್ತಿದ್ದ. ಈ ವೇಳೆ ವಿಷ್ಣು ಟ್ರಿಗರ್ ಒತ್ತಿದ್ದಾನೆ. ಪರಿಣಾಮ ಏರ್ ಗನ್ ಫೈರ್ ಆಗಿದ್ದು, ನೇರವಾಗಿ ಗನ್ ನೊಳಗಿದ್ದ ಬಾಲ್ಸ್ ವಿಷ್ಣುವಿನ ಹೃದಯ ಭಾಗಕ್ಕೆ ಹೊಕ್ಕಿದೆ. ಪೋಷಕರು ಮನೆಯಲ್ಲಿ ಇದ್ದಾಗಲೇ ಈ ದುರ್ಘಟನೆ ನಡೆದಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ; ಗ್ರಾಮ ಪಂಚಾಯಿತಿಯಲ್ಲೇ ಸಿಗಲಿದೆ ಇ-ಶ್ರಮ ಕಾರ್ಡ್; ಕೆಲಸದ ಭದ್ರತೆ ಸೇರಿದಂತೆ 2 ಲಕ್ಷ ರೂ.ವರೆಗೆ ವಿಮೆ ಸೌಲಭ್ಯ
ಈ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ನಿಮ್ಮ ಖಾತೆಗೆ ಬೆಳೆ ವಿಮೆ ಹಣ ಜಮಾ ಆಗಿದ್ಯಾ?; ಈ ರೀತಿ ಚೆಕ್ ಮಾಡಿ
ಪಿಯುಸಿಯಲ್ಲಿ ಶೃಂಗೇರಿಯ ಜೆ. ಸಿ. ಬಿ. ಎಂ. ಕಾಲೇಜಿಗೆ 100% ಫಲಿತಾಂಶ
2023-24ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೃಂಗೇರಿಯ ಜೆ. ಸಿ. ಬಿ. ಎಂ. ಕಾಲೇಜು 115 ಅತ್ಯುನ್ನತ ಶ್ರೇಣಿಯೊಂದಿಗೆ ಶೇ 100 ಫಲಿತಾಂಶ ಪಡೆದುಕೊಂಡಿದೆ.
ಮಾರ್ಚ್ 2024ರಲ್ಲಿ ನಡೆದ ದ್ವಿತೀಯ ಪಿ. ಯು. ಸಿ. ಪರೀಕ್ಷೆಯಲ್ಲಿ ಹಾಜರಾದ ಒಟ್ಟು 257 ವಿದ್ಯಾರ್ಥಿಗಳಲ್ಲಿ 257 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 100 ಫಲಿತಾಂಶ ಬಂದಿರುತ್ತದೆ ಎಂದು ಪದವಿ ಪೂರ್ವ ವಿಭಾಗದ ಸಂಯೋಜಕರಾದ ಪ್ರಶಾಂತ್ ತಿಳಿಸಿದ್ದಾರೆ.
115 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್, 123 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ವಾಣಿಜ್ಯ ವಿಭಾಗದ ಕು. ಇಂಚರಾ ಕೆ.ಜಿ 587 (ಶೇ. 98) ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ವಾಣಿಜ್ಯ ವಿಭಾಗದ ಕು. ಆಶಿಕಾ ಎ. ಎಲ್ 585 (ಶೇ 97.55) ಮತ್ತು ಮಧುಸೂಧನ್ ವಿ ಆರ್ 585 (ಶೇ 97.55) ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದಿದ್ದು, ವಿಜ್ಞಾನ ವಿಭಾಗದ ಐಶ್ವರ್ಯ ಯು ಪೈ 581 (ಶೇ 97) ಮತ್ತು ವಿಧಾತ್ರಿ ಬಿ.ಯು 581 (ಶೇ 97) ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಎಂ ಸ್ವಾಮಿ ಹಾಗೂ ಸಿಬ್ಬಂದಿವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.













