
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಒತ್ತುವರಿ ತೆರವು ವೇಳೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅಂಬಳೆ ಹೋಬಳಿಯ ಕೆ.ಆರ್ ಪೇಟೆ ಪೋಸ್ಟ್ ಕಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಲ್ಲೇಶ್ (42) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ.
ಇದನ್ನೂ ಓದಿ; PM Kisan 18ನೇ ಕಂತಿನ ಹಣ ಜಮಾ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಈಗಲೇ ಚೆಕ್ ಮಾಡಿ

ಬೊಮ್ಮನ ಕೊಡಿ ಕೆರೆ ಪಕ್ಕ ಆಲಮ್ಮ, ಕಲ್ಲೇಗೌಡ ಇವರ ಜಮೀನು ಇದ್ದು, ಕೆರೆಯ ಒಂಬತ್ತು ಗುಂಟೆ ಜಾಗವನ್ನು ಒತ್ತುವರಿ ಮಾಡಿದ್ದಾರೆ ಎಂದು ಅಧಿಕಾರಿಗಳು ತೆರವಿಗೆ ಬಂದ ವೇಳೆ ಮಲ್ಲೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್; ಆರೋಗ್ಯ ವಿಮೆ ಯೋಜನೆ ಜಾರಿ
ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ; ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ













