
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಪಟಾಕಿ ಸಿಡಿದು ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯಲ್ಲಿ ನಡೆದಿದೆ. ಪ್ರದೀಪ್ (30) ಪಟಾಕಿ ಸಿಡಿದು ಮೃತಪಟ್ಟ ದುರ್ದೈವಿ.
ಇದನ್ನೂ ಓದಿ; ವಯನಾಡಿನಲ್ಲಿ ನಕ್ಸಲರು ಪೊಲೀಸರ ನಡುವೆ ಫೈರಿಂಗ್; ಮಲೆನಾಡಿನ ಈ ಜಿಲ್ಲೆಯಲ್ಲಿ ಹೈ ಅಲರ್ಟ್

ಅಡಕೆ ಗೋಟು (ಕಲ್ಲು ಆಟಂಬಾಂಬ್) ಪಟಾಕಿಯನ್ನ ಚೇರ್ ಕೆಳಗೆ ಇಟ್ಟುಕೊಂಡು ಕೂತಿದ್ದ ಪ್ರದೀಪ್, ಪಟಾಕಿ ಸಿಡಿದ ರಭಸಕ್ಕೆ ನೆಲದಿಂದ 5 ಅಡಿ ಹಾರಿ ಬಿದ್ದಿದ್ದಾನೆ. ದೇಹದ ಸೂಕ್ಷ್ಮ ಜಾಗಕ್ಕೆ ಗಂಭೀರ ಒದೆ ಬಿದ್ದ ಕಾರಣ ಪ್ರದೀಪ್ ಸಾವನ್ನಪ್ಪಿದ್ದಾರೆ. ಇನ್ನು ಪ್ರದೀಪ್ ಜೊತೆಗಿದ್ದ ಮತ್ತೋರ್ವ ಯುವಕನಿಗೆ ಗಂಭೀರ ಗಾಯವಾಗಿದ್ದು, ಮೂವರು ಮಕ್ಕಳಿಗೂ ಗಾಯಗಳಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಲ್ಲು ಆಟಂಬಾಂಬ್ ಸಿಡಿದ ರಭಸಕ್ಕೆ ಮನೆಯ ಗ್ಲಾಸ್ ಗಳು ಪುಡಿ-ಪುಡಿಯಾಗಿದೆ.

ಇದನ್ನೂ ಓದಿ; ಚಿನ್ನ ಮತ್ತು ಬೆಳ್ಳಿ ಎರಡೂ ಮತ್ತಷ್ಟು ಅಗ್ಗ; ಇವತ್ತಿನ ದರವೆಷ್ಟು, ಇಲ್ಲಿದೆ ವಿವರ
ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೂಡಿಗೆರೆ: ನಾಲ್ಕು ಕಡೆ ಪ್ರತ್ಯೇಕ ಅಪಘಾತ, ಮೂವರು ಗಂಭೀರ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಹಬ್ಬದಂದೆ ಪ್ರತ್ಯೇಕ ನಾಲ್ಕು ಕಡೆ ಅಪಘಾತಗಳು ಸಂಭವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಸಮೀಪ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮಂಭಾಗ ನಜ್ಜುಗುಜ್ಜಾಗಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು:
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಪಲ್ಗುಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಇದನ್ನೂ ಓದಿ; ನಿಮ್ಹಾನ್ಸ್ ನಲ್ಲಿ ವಾಕ್ ಇನ್ ಇಂಟರ್ವ್ಯೂ; 32 ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸ್ಕೂಟರ್ ಪಲ್ಟಿ, ಚಾಲಕನಿಗೆ ಗಂಭೀರ ಗಾಯ:
ಸ್ಕೂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೈ ಹಾಗೂ ಕಾಲುಮೂಳೆ ಕಟ್ಟಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಪಲ್ಗುಣಿ ರಾಷ್ಟ್ರೀಯ ಹೆದ್ದಾರಿ ತಿರುವಿನಲ್ಲಿ ನಡೆದಿದೆ. ಸ್ಕೂಟರ್ ಸವಾರ ಸಕಲೇಶಪುರ ಮೂಲದವರು ಎನ್ನಲಾಗಿದ್ದು, ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಎರಡು ಅಪಘಾತಗಳು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ:
ಮೂಡಿಗೆರೆ ತಾಲ್ಲೂಕಿನ ಅಣಜೂರು ಬಳಿ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಎರಡು ವಾಹನದಲ್ಲಿ ಇಬ್ಬರಿಗೆ ಹೆಚ್ಚು ಪೆಟ್ಟಾಗಿದ್ದು, ಒಬ್ಬರನ್ನು ಮಂಗಳೂರು ಆಸ್ಪತ್ರೆ ಹಾಗೂ ಮತ್ತೊಬ್ಬರಿಗೆ ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಒಟ್ಟು ಮೂರು ಅಪಘಾತಗಳು ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.













