ಚಿಕ್ಕಮಗಳೂರು: ನಗದು ಕಳವು ಮಾಡಿದ ಆರೋಪಿ ಬಂಧನ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಗದು ಕಳವು ಮಾಡಿದ ಆರೋಪಿಯನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದಲ್ಲಿ ನಡೆದಿದೆ.

 

ಇದನ್ನೂ ಓದಿ; ಎಂಟ್ರಿ ಕೊಡ್ತಿದ್ದಾಗೆ ಎಲ್ಲಾ ಮಾಧ್ಯಮಗಳಿಗೆ, ರಾಜಕಾರಣಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಅರ್ನಬ್ ಗೋಸ್ವಾಮಿ

ಕುಶಾಲಗೌಡ ಬೀದಿಯ ಮನೆವೊಂದರಲ್ಲಿ 31.08.2023 ರಮದು 1.40 ಲಕ್ಷ ನಗದು ಕಳವು ಪ್ರಕರಣದಲ್ಲಿ ಪಿ.ಎಸ್.ಐ ಸಖರಾಯಪಟ್ಟಣ ಮತ್ತು ತಂಡ ಓರ್ವ ಆರೋಪಿಯನ್ನು 24 ಗಂಟೆಯೊಳಗಾಗಿ ಬಂಧಿಸಿದ್ದಾರೆ.

 

ಇದನ್ನೂ ಓದಿ; ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ವಾ?; ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಆಗಬೇಕಾ?

ಬಂಧಿತ ಆರೋಪಿಯಿಂದ ಕಳವು ಮಾಡಿದ್ದ 25 ಸಾವಿರ ಮೌಲ್ಯ 2 ಮೊಬೈಲ್ ಫೋನ್ ಮತ್ತು ರೂ. 27 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.

 

ಮಲೆನಾಡು ಭಾಗದಲ್ಲಿ ನಿಲ್ಲದ ಕಾಡಾನೆ ದಾಳಿ | ಕಾಡಾನೆ ಕಾಲ್ತುಳಿತಕ್ಕೆ ವ್ಯಕ್ತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ಕಾಲ್ತುಳಿತಕ್ಕೆ ವ್ಯಕ್ತಿಯೊಬ್ಬರು ಸ್ಥಳಸಲ್ಲೇ ಸಾವನ್ನಪ್ಪಿರಿವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅರೆನೂರು ಗ್ರಾಮದಲ್ಲಿ ನಡೆದಿದೆ. ದುರ್ಗಾ ಕಿನ್ನಿ (60) ಕಾಡಾನೆ ಕಾಲ್ತುಳಿತಕ್ಕೆ ಮೃತಪಟ್ಟ ವ್ಯಕ್ತಿ.

ಅರೆನೂರು-ಕಂಚುಕಲ್ ದುರ್ಗಾ ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುವಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಆಲ್ದೂರು ವಲಯ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯ ಅರಣ್ಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಫಿನಾಡ ಮಲೆನಾಡು ಭಾಗದಲ್ಲಿ ನಿಲ್ಲದ ಕಾಡಾನೆ ದಾಳಿಯಿಂದ 2 ವರ್ಷದಲ್ಲಿ 6 ಕ್ಕೂ ಹೆಚ್ಚು ಜನ ಆನೆ ದಾಳಿಗೆ ಬಲಿಯಾಗಿದ್ದಾರೆ. ಕಾರ್ಮಿಕರು ಗದ್ದೆ, ತೋಟದ ಕೆಲಸಕ್ಕೆ ಹೋಗಲು ಆತಂಕ ಪಡುವ ಸ್ಥಿತಿ ಎದುರಾಗಿದೆ. ಕಾಫಿತೋಟ, ಗದ್ದೆ, ಜಮೀನುಗಳಲ್ಲಿ ಕಾಣಿಸಿಕೊಳ್ಳುತ್ತಿವೆ. ಬೆಳೆದ ಬೆಳೆಯನ್ನು ರಾತ್ರೋ ರಾತ್ರಿ ತಿಂದು ಇಲ್ಲವೇ ತುಳಿದು ರೈತನ ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಮಾಡಿ ರೈತರ ಸಂಕಷ್ಟಕ್ಕೆ ಆನೆಗಳು ಕಾರಣವಾಗುತ್ತಿವೆ. ಆನೆ ದಾಳಿಗೆ ಒಳಗಶದವರಿಗೆ ಪರಿಹಾರ ಇದೆಲ್ಲವನ್ನು ಬದಿಗಿಟ್ಟು, ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸುವ ಗಂಭೀರ ಪ್ರಯತ್ನಗಳು ಆಗುತ್ತಿಲ್ಲ. ಆನೆ ದಾಳಿಯಿಂದ ಸತ್ತಾಗ ಸಾಂತ್ವನ, ಹೋರಾಟ ಬಿಟ್ಟರೆ ಪುನಃ ಗ್ರಾಮೀಣ ಪ್ರದೇಶದ ಜನರು ಸಮಸ್ಯೆ ಎದುರಿಸುವುದು ಮಾತ್ರ ತಪ್ಪುತ್ತಿಲ್ಲ.

ಚಿಕ್ಕಮಗಳೂರು: ಕೈಕೊಟ್ಟ ವರುಣದೇವ | ಮಳೆಗಾಗಿ 37 ವರ್ಷದ ಹಿಂದಿನ ಆಚರಣೆಗೆ ಮುಂದಾದ ಮಲೆನಾಡಿಗರು

ಚಿಕ್ಕಮಗಳೂರು:  (ನ್ಯೂಸ್ ಮಲ್ನಾಡ್ ವರದಿ) ಮಳೆಗಾಗಿ ಮಲೆನಾಡಿನ ಜನರು ಹಿಂದಿನ ಸಂಪ್ರದಾಯಕ್ಕೆ ಮಾರು ಹೋಗುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕೆಲವು ಗ್ರಾಮಗಳ ಜನತೆ ಹಿಂದಿನ ಸಂಪ್ರದಾಯ ಆಚರಣೆಗೆ ಮುಂದಾಗಿದ್ದಾರೆ.

ನರಸಿಂಹರಾಜಪುರ ತಾಲೂಕಿನ ಅಳೇಹಳ್ಳಿ, ಹೆನ್ನಂಗಿ, ಬೆಳ್ಳಂಗಿ ಗ್ರಾಮದ ಜನತೆ ಮಳೆಗಾಗಿ ಪ್ರಾರ್ಥಿಸಿ ಪರದೇಶಪ್ಪನ ಮಠದ ಗುರುಗಳ ನೇತೃತ್ವದಲ್ಲಿ ಗಂಗೇಗಿರಿ ಬೆಟ್ಟ ಹತ್ತುತ್ತಿದ್ದಾರೆ. ಕಳೆದ 37 ವರ್ಷಗಳ ಹಿಂದೆ ಇದೇ ರೀತಿ ಮಳೆ ಅಭಾವ ಉಂಟಾಗಿತ್ತು. ಬರದ ಛಾಯೆ ಮೂಡಿತ್ತು. ಇಂತಹ ವೇಳೆಯಲ್ಲಿ ಇಲ್ಲಿನ ಜನರು ಬೆಟ್ಟ ಹತ್ತಿ ದೇವರದಲ್ಲಿ ಪ್ರಾರ್ಥಿಸಿದ್ದರು. ಗಂಗೇಗಿರಿ ಬೆಟ್ಟ ಹತ್ತಿ ಅಲ್ಲಿ ಪೂಜೆ ಸಲ್ಲಿಸಿದರೇ ಮಳೆ ಬರುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆಯಾಗಿದೆ.

ಗಿರಿಯಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಕಳಸದಲ್ಲಿ ಅಲ್ಲಿನ ನೀರು ತಂದು, ಪೂಜೆ ಮಾಡಬೇಕು. 9 ದಿನಗಳ ಕಾಲ ಮಡಿಯಿಂದ ಇದ್ದು ಪೂಜೆ ಮಾಡಬೇಕು ಎಂಬ ಪ್ರತೀತಿ ಇದ್ದು, ಮಳೆಯಾಗುತ್ತದೆ ಎಂಬ ನಂಬಿಕೆ ಇದೆ. ಈ ನಿಟ್ಟಿನಲ್ಲಿ ಇಲ್ಲಿನ ಜನರು ಮಳೆಗಾಗಿ ಪ್ರಾರ್ಥಿಸಿ ಬೆಟ್ಟ ಏರುತ್ತಿದ್ದಾರೆ. ಈ ವರ್ಷ ಮಳೆ ಕೈಕೊಟ್ಟಿದೆ. ಮಲೆನಾಡಿನಲ್ಲೇ ಮಳೆ ಕೊರತೆ ಉಂಟಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಬಿತ್ತಿದ ಬೆಳೆ ಕೈ ಸೇರುತ್ತೋ ಇಲ್ಲವೋ ಎಂಬ ಆತಂಕ ಮನೆ ಮಾಡಿದ್ದು, ಹಿಂದಿನ ಸಂಪ್ರದಾಯಗಳ ಕಡೆ ಮುಖ ಮಾಡಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.