ಆಗುಂಬೆ: (ನ್ಯೂಸ್ ಮಲ್ನಾಡ್ ವರದಿ) ರಸ್ತೆಯ ಬದಿಯಲ್ಲಿ ದೊಡ್ಡದಾದ ಹೊಂಡ ದಿಮ್ಮಿ ಬಿದ್ದ ಕಾರಣ ಬಿ. ಟಿ. ಉಮೇಶ್ ಬಿಳಿಗೆರೆ ಅವರು ತಮ್ಮ ಸ್ವಂತ ಖರ್ಚಿನಲ್ಲಿ ರಸ್ತೆ ಬದಿಯ ಕಡಿದುಗಳಿಗೆ ಮಣ್ಣು ತುಂಬಿಸಿದ್ದಾರೆ.
ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ!; ಸರ್ಕಾರದಿಂದ ಮಹತ್ವದ ಸುದ್ದಿ

ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಮದ ಬಿಳಿಗೆರೆ ನಿವಾಸಿಯಾದ ಇವರು ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದ ಸಾಮಾನ್ಯ ನಾಗರೀಕರಾಗಿದ್ದಾರೆ. ಜೀವನೋಪಾಯಕ್ಕಾಗಿ ತನ್ನದೇ ಆದ ಜೆಸಿಬಿ ಮತ್ತು ಟ್ರಾಕ್ಟರ್ ಉದ್ಯಮ ನಡೆಸುತ್ತಿದ್ದಾರೆ.

ಗುಡ್ಡೇಕೇರಿ – ಹೊಸಗದ್ದೆ ರಾಜ್ಯ ಹೆದ್ದಾರಿಯಲ್ಲಿ ನಿತ್ಯ ನೂರಾರು ಸಾರ್ವಜನಿಕ ವಾಹನಗಳು ಹಾಗೂ ಶೃಂಗೇರಿ – ಕುಂದಾದ್ರಿಗೆ ಆಗಮಿಸುವ ಪ್ರವಾಸಿಗರು ಇದೇ ರಸ್ತೆಯ ಮಾರ್ಗದಲ್ಲಿ ಸಂಚರಿಸುತ್ತಿದ್ದು, ರಾಜ್ಯ ಹೆದ್ದಾರಿ ಪ್ರಾಧಿಕಾರದ ಸರಿಯಾದ ನಿರ್ವಹಣೆ ಇಲ್ಲದೆ ರಸ್ತೆಯ ಬದಿಯಲ್ಲಿ ದೊಡ್ಡದಾದ ಹೊಂಡ ದಿಮ್ಮಿ ಇದ್ದ ಕಾರಣ ಸಣ್ಣ ವಾಹನ ಸವಾರರಿಗೆ ಹಾಗೂ ಶಾಲಾ ಮಕ್ಕಳ ವಾಹನಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಈ ಕುರಿತು ಸಂಬಂಧಿತ ಇಲಾಖೆಗಳ ಗಮನಕ್ಕೂ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…
ಹೀಗಾಗಿ ಬಿ. ಟಿ. ಉಮೇಶ್ ಬಿಳಿಗೆರೆ ತಮ್ಮ ಸ್ವಂತ ಖರ್ಚಿನಲ್ಲಿ ರಸ್ತೆ ಬದಿಯ ಕಡಿದುಗಳಿಗೆ ಮಣ್ಣು ತುಂಬಿಸಿದ್ದಾರೆ.
ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ













