ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟಿ ರಸ್ತೆಯ ಚಾರ್ಮಾಡಿ ಹಳ್ಳದಿಂದ ಘಾಟಿಯ 11ನೇ ತಿರುವು ವರೆಗಿನ 11.2 ಕಿ.ಮೀ ಅಭಿವೃದ್ಧಿಯ 490 ಕೋಟಿ ವೆಚ್ಚದ ಕಾಮಗಾರಿಗೆ ಸಂಬಂಧಿಸಿದ ಪ್ರಸ್ತಾವಕ್ಕೆ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ.
ಇದನ್ನೂ ಓದಿ; ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?

ಈ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿಯ ಮೊದಲ ಹಂತ ಬಂಟ್ವಾಳದ ಬಿ.ಸಿ ರೋಡ್ ನಿಂದ ಪುಂಜಾಲಕಟ್ಟೆವರೆಗೆ ಪೂರ್ಣಗೊಂಡಿದ್ದು ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗಿನ ಕಾಮಗಾರಿ ಪ್ರಗತಿಯಲ್ಲಿದೆ. ಚಾರ್ಮಾಡಿ ಘಾಟಿಯಲ್ಲಿ ಮೂರನೇ ಹಂತದ ಈ ಕಾಮಗಾರಿಯ ಡಿಪಿಆರ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇದನ್ನೂ ಓದಿ; ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ
ಚಾರ್ಮಾಡಿ ಘಾಟಿ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 25 ಕಿ.ಮೀ ವ್ಯಾಪ್ತಿ ಹೊಂದಿದೆ. ಈ ಪೈಕಿ ದಕ್ಷಿಣ ಕನ್ನಡ ಭಾಗದ 11.20 ಕಿ.ಮೀ. ರಸ್ತೆ ಅಭಿವೃದ್ಧಿ ಹೊಂದಲಿದೆ. ರಸ್ತೆ 10 ಮೀಟರ್ ಅಗಲವಾಗಲಿದೆ. 7,745 ಕೋಟಿ ವೆಚ್ಚದಲ್ಲಿ ದೇಶದ ಒಟ್ಟು 588 ಕಿ.ಮೀ ರಸ್ತೆಯ 21 ಯೋಜನೆಗಳ ಪ್ರಸ್ತಾವಕ್ಕೆ ಅನುಮೋದನೆ ಲಭಿಸಿದೆ. ಈ ಯೋಜನೆಗಳಲ್ಲಿ ಚಾರ್ಮಾಡಿ ಘಾಟಿಯ ಅಭಿವೃದ್ಧಿಯೂ ಸೇರಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಮೌಲಿಕ್ ಎ ತಿಳಿಸಿದರು.
ರಸ್ತೆ ಅಭಿವೃದ್ಧಿಯಿಂದ ಪ್ರಯಾಣಿಕರಿಗೆ ಅನುಕೂಲ:
ಸೌ೦ದರ್ಯದ ಜೊತೆ ಅಪಾಯಕಾರಿಯೂ ಆಗಿರುವ ಚಾರ್ಮಾಡಿ ಘಾಟಿ ಪರಿಸರದಲ್ಲಿ ಸಾಕಷ್ಟು ಗುಡ್ಡಗಳು, ಬಂಡೆಕಲ್ಲು, ಮರಗಳು ಇದ್ದು, ಇವೆಲ್ಲ ರಸ್ತೆಗೆ ಉರುಳಿ ಬೀಳುವುದು ಮಳೆಗಾಲದಲ್ಲಿ ಸಾಮಾನ್ಯವಾಗಿದೆ. ವಾಹನ ದಟ್ಟಣೆಯೂ ಅಧಿಕವಿರುವ ಕಾರಣ ಘಾಟ್ ಪರಿಸರದ ರಸ್ತೆ ಅಗಲೀಕರಣ ಅಗತ್ಯವಾಗಿತ್ತು. ರಸ್ತೆ ಅಭಿವೃದ್ಧಿಯಿಂದ ವಾಹನ ಸವಾರರು ಹಾಗೂ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.
ಕೊಪ್ಪ: ಸುಧಾಕರ್ ಎಸ್ ಶೆಟ್ಟಿ ಅವರನ್ನು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯ
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಮುಂದಿನ ಲೋಕಸಭಾ ಚುನಾವಣೆಗೆ ಸುಧಾಕರ್ ಎಸ್ ಶೆಟ್ಟಿ ಅವರು ಸ್ಪರ್ದಿಸುವಂತೆ ನಿನ್ನೆ ಜೆಡಿಎಸ್ ಪದಾಧಿಕಾರಿಗಳ ಸಭೆಯಲ್ಲಿ ಒತ್ತಾಯ ಮಾಡಿದ್ದರು.
ಕೊಪ್ಪದ ಗುಣವಂತೆಯಲ್ಲಿರುವ ಜೆಡಿಎಸ್ ನಾಯಕರಾದ ಹೆಚ್. ಜಿ ವೆಂಕಟೇಶ್ ರವರ ನಿವಾಸದಲ್ಲಿ ಶನಿವಾರ ನಡೆದ ಸಭೆಯಲ್ಲಿ ಈ ಬಗ್ಗೆ ಒತ್ತಾಯಿಸಿದ್ದಾರೆ. ಇನ್ನು ಸಭೆಯಲ್ಲಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಮತ್ತು NDA, I.N.D.I.A ಯ ಎರಡು ಘಟಬಂಧನಗಳ ಕಾರ್ಯವೈಖರಿಯನ್ನು ಅಮೂಲಾಗ್ರವಾಗಿ ಚರ್ಚಿಸಲಾಯಿತು. ಜೆಡಿಎಸ್ ಪಕ್ಷವು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರೆ ಪಕ್ಷದ ಮೇಲೆ ಆಗುವ ಪರಿಣಾಮಗಳನ್ನು ವಿಸ್ತಾರವಾಗಿ ಪದಾಧಿಕಾರಿಗಳು ಚರ್ಚಿಸಿದರು. ಮೈತ್ರಿಯ ರೂಪುರೇಖೆಗಳು ಏನು ಎನ್ನುವುದನ್ನು ಕೊಪ್ಪ, ಎನ್ ಆರ್ ಪುರ, ಬಾಳೆಹೊನ್ನೂರು, ಶೃಂಗೇರಿ ಹಾಗೂ ಖಾಂಡ್ಯ ಘಟಕಗಳ ಅಧ್ಯಕ್ಷರುಗಳು ವಿಸ್ತೃತವಾದ ಚರ್ಚೆ ನಡೆಯಬೇಕಾಗಿದೆ. ಚುನಾವಣೆ ಹೊಂದಾಣಿಕೆ ಲೋಕಸಭೆ, ವಿಧಾನಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಸ್ಥಳೀಯ ಸಂಘ-ಸAಸ್ಥೆಗಳವರೆಗೆ ನಡೆದರೆ ಮಾತ್ರ ಮೈತ್ರಿಗೆ ಒಂದು ಅರ್ಥವಿರುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಮಾತನಾಡಿದ ಅಲ್ಪಸಂಖ್ಯಾತ ಘಟಕದ ನಾಯಕರುಗಳು, ಜೆಡಿಎಸ್ ಬಿಜೆಪಿ ಮೈತ್ರಿ ವತಿಯಿಂದ ಯಾವುದೇ ಕಾರಣಕ್ಕೂ ರಾಜ್ಯದ ಅಲ್ಪಸಂಖ್ಯಾತರ ಮೇಲೆ ಯಾವುದೇ ತೊಂದರೆ ಆಗಲಿ ದಬ್ಬಾಳಿಕೆ ಆಗಲಿ ನಡೆಯಲಾರದು. 2006 ರಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆ ಸರ್ಕಾರ ಮಾಡಿದಾಗಲೂ ಎಲ್ಲಾ ಅಲ್ಪಸಂಖ್ಯಾತರ ಹಿತ ರಕ್ಷಣೆಯನ್ನು ಜೆಡಿಎಸ್ ಪಕ್ಷಕ್ಕಾಗಿದೆ. ಅಲ್ಪಸಂಖ್ಯಾತರ ಕಾನೂನುಗಳಿಗೆ ಶೇಖರ 4% ನೀಡಿರುವುದು ಹೆಚ್. ಡಿ ದೇವೇಗೌಡರು ಹಾಗೂ ಕುಮಾರಣ್ಣ ಎನ್ನುವುದನ್ನು ಸಭೆಯ ಗಮನಕ್ಕೆ ತಂದರು.
ಕಳೆದ ವಿಧಾನಸಭೆ ಚುನಾವಣೆಯೆ ಬೇರೆ ಮುಂಬರುವ ಲೋಕಸಭೆ ವಿಧಾನಸಭೆಗಳೆ ಬೇರೆ ಆದ್ದರಿಂದ ಅಲ್ಪಸಂಖ್ಯಾತರಲ್ಲಿ ಕೆಲವು ರಾಜಕೀಯ ನಾಯಕರುಗಳು ಮಾತನಾಡುವ ರೀತಿಯೇ ಬೇರೆ ಆದರೆ ದೇವೇಗೌಡರ ಬಗ್ಗೆ ಅಲ್ಪಸಂಖ್ಯಾತರ ಸಮುದಾಯ ಸಂಪೂರ್ಣ ನಂಬಿಕೆ ಹೊಂದಿದೆ ಎನ್ನುವುದನ್ನು ಅಲ್ಪಸಂಖ್ಯಾತರ ಮುಖಂಡರುಗಳು ಸ್ಪಷ್ಟಪಡಿಸಿದರು.
ಹೆಚ್. ಜಿ ವೆಂಕಟೇಶ್ ಮಾತನಾಡಿ, ರವರು ಎಲ್ಲಾ ಸಮುದಾಯ ವರ್ಗಗಳ ಹಿತ ರಕ್ಷಣೆ ಕಾಯುವುದೇ ಜೆಡಿಎಸ್ ಪಕ್ಷದ ಮುಖ್ಯ ಉದ್ದೇಶ. ಇಲ್ಲಿ ಅಲ್ಪಸಂಖ್ಯಾತರು ದಲಿತರು ಹಿಂದುಳಿದವರು ಹಾಗೂ ರೈತಾಪಿ ವರ್ಗದ ಹಿತ ರಕ್ಷಣೆಯನ್ನು ಜೆಡಿಎಸ್ ಪಕ್ಷವು ಕಾಪಾಡುತ್ತದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯದ ಉಪಾಧ್ಯಕ್ಷರು ಹಾಗೂ ಕೋರ್ ಕಮಿಟಿ ಸದಸ್ಯರಾದ ಸುಧಾಕರ್ ಎಸ್ ಶೆಟ್ಟಿ, ಬಿ. ಹೆಚ್ ದಿವಾಕರ್ ಭಟ್, ಕಳಸಪ್ಪ, ಚಂದ್ರಶೇಖರ್, ಪೂರ್ಣಚಂದ್ರ ಹಾಗೂ ಸದಸ್ಯರುಗಳು ಇದ್ದರು.













