
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)ಕೆರೆಗೆ ಈಜಲು ತೆರಳಿದ ಬಾಲಕನೋರ್ವ ನೀರುಪಾಲಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಕೆರೆಯಲ್ಲಿ ನಡೆದಿದೆ.
ಇದನ್ನೂ ಓದಿ: ರೈತರ ಗಮನಕ್ಕೆ; ಈ ಕೆಲಸ ಮಾಡದಿದ್ದರೆ ಖಾತೆಗೆ ಬರಲ್ಲ ಪಿಎಂ ಕಿಸಾನ್ ಯೋಜನೆಯ ಹಣ; ತಕ್ಷಣವೇ ಈ ರೀತಿ ಮಾಡಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕೆರೆಗೆ ಈಜಲು ತೆರಳಿದ ಬಾಲಕನೋರ್ವ ನೀರುಪಾಲಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಕೆರೆಯಲ್ಲಿ ನಡೆದಿದೆ.

ನಾಲ್ವರು ವಿದ್ಯಾರ್ಥಿಗಳು ಜೊತೆಗೂಡಿ ಕೋಟೆ ಕೆರೆಗೆ ಈಜಲು ತೆರಳಿದ್ದಾರೆ ಈ ವೇಳೆ ಶಶಾಂಕ್ ನೀರಿನಡಿ ಕೆಸರಿನಲ್ಲಿ ಕಾಲು ಸಿಲುಕಿಕೊಂಡು ಮೇಲೆ ಬರಲಾಗದೆ ಮೃತಪಟ್ಟಿದ್ದಾನೆ ಕೂಡಲೇ ಜೊತೆಗಿದ್ದ ಇತರರು ವಿಚಾರವನ್ನು ಸ್ಥಳೀಯರಿಗೆ ಹೇಳಿದ್ದಾರೆ.
ಇದನ್ನೂ ಓದಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ; ಗ್ರಾಮ ಆಡಳಿತ ಅಧಿಕಾರಿ ಸೇರಿ 5 ಇಲಾಖೆಗಳ ಹುದ್ದೆಗೆ ಪರೀಕ್ಷೆ ಪ್ರಕಟ
ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ತಂಡ ದೌಡಾಯಿಸಿ ನೀರಿನಲ್ಲಿ ಮುಳುಗಿದ್ದ ಬಾಲಕನನ್ನು ಮೇಲಕ್ಕೆತ್ತಿದ್ದಾರೆ ಆದರೆ ದುರಾದೃಷ್ಟವಶಾತ್ ಬಾಲಕ ಸಾವನ್ನಪ್ಪಿದ್ದಾನೆ.
ಬಾಲಕನ ಮೃತದೇಹ ನೀರಿನಿಂದ ಹೊರತರುತ್ತಿದ್ದಂತೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಶಾಕ್; ಅನ್ನಭಾಗ್ಯ ನಗದು ವರ್ಗಾವಣೆ ಸ್ಥಗಿತ
ಕೊಪ್ಪ: ಹಿಂದೂ ಸೇವಾ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ಸೇವಾ ಶಿಕ್ಷಣ ಶಿಬಿರ ಕಾರ್ಯಕ್ರಮ
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಹಿಂದೂ ಸೇವಾ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ರಾಜ್ಯದ ಸೇವಾ ಶಿಕ್ಷಣ ಶಿಬಿರವು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಕಟಪುರ ಶ್ರೀ ಮಠದಲ್ಲಿ ಶುಕ್ರವಾರದಿಂದ (ಮೇ 23 ರಿಂದ) ಜೂನ್ 2 ವರೆಗೆ ನಡೆಯಲಿದೆ.
ಇದನ್ನೂ ಓದಿ: ಸರ್ಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್..!; ಮಹತ್ವದ ಆದೇಶ ಕೊಟ್ಟ ಸಿಎಂ ಸಿದ್ದರಾಮಯ್ಯ!
ಶುಕ್ರವಾರ ಶಿಬಿರವನ್ನು ಉದ್ಘಾಟಿಸಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘ, ಶೃಂಗೇರಿ ಜಿಲ್ಲೆಯ ಮಾನ್ಯ ಸಂಘ ಚಾಲಕರಾದ ನಾರಾಯಣ ಟಿ.ಕೆ, ಶಕಟಪುರ ಮಠದ ಅಧಿಕಾರಿಗಳಾದ ಸೋಮಶೇಖರ್ ಮತ್ತು ಹಿಂದೂ ಸೇವಾ ಪ್ರತಿಷ್ಠಾನದ ರಾಜ್ಯ ನಿರ್ದೇಶಕರಾದ ಸುರೇಶ್ ಅವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸಮಾಜದಲ್ಲಿ ಸಂಸ್ಕಾರ ಕೇಂದ್ರಿತ ಸೇವಾ ಚಟುವಟಿಕೆ ನಡೆಸುವ ಕಾರ್ಯಕರ್ತರನ್ನು ತಯಾರು ಮಾಡುವ ಶಿಬಿರ ಇದಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ 115 ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಬೋಧಿನಿ ಗುರುಕುಲದ ಉಮೇಶ್, ತಾಲೂಕು ಸಂಯೋಜಕರಾದ ನೂತನ ಸೂರ್ಯ ಮುಂತಾದವರು ಉಪಸ್ಥಿತಿ ಇದ್ದರು.













