ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ಹರಿಸಿ ಕಾಡಾನೆಯೊಂದನ್ನು ಕೊಂದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಕಂಚಿನ ಕಲ್ಲು ದುರ್ಗದ ಖಾಸಗಿ ಕಾಫಿ ತೋಟದಲ್ಲಿ ನಡೆದಿದೆ.

ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಮಹತ್ವದ ಮಾಹಿತಿ; RBI ನಿಂದ ಮತ್ತೆ ನಿಯಮ ಬದಲಾವಣೆ; ಮಿಸ್ ಮಾಡ್ದೆ ಈ ಸುದ್ದಿ ಓದಿ

ಕಳೆದ ವಾರ ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚಿನಕಲ್ ದುರ್ಗ ಸಮೀಪದ ಕೆಸುವಿನಕಲ್ ಕಾಫಿ ಎಸ್ಟೇಟ್ ನಲ್ಲಿ ಆನಂದ ಪೂಜಾರಿ ಎಂಬುವವರನ್ನು ಈ ಕಾಡಾನೆ ತುಳಿದು ಸಾಯಿಸಿತ್ತು ಎನ್ನಲಾಗಿದೆ. ಈ ಕಾಡಾನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ತಯಾರಿ ನಡೆಸಿತ್ತು. ಆದರೆ ಇದೀಗ ಖಾಸಗಿ ಕಾಫಿ ತೋಟದಲ್ಲಿ ವಿದ್ಯುತ್ ಹರಿಸಿ ಕಾಡಾನೆಯನ್ನು ಕೊಲ್ಲಲಾಗಿದೆ ಎನ್ನಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ನಿಮ್ಮ ಖಾತೆಗೆ ಶೀಘ್ರವೇ ಬರಲಿದೆ ಪಿಎಂ ಕಿಸಾನ್ ಹಣ!
ಇತ್ತೀಚೆಗೆ ಮೂಡಿಗೆರೆ, ಆಲ್ದೂರು ಭಾಗದಲ್ಲಿ ಆನೆ ಮಾನವ ಸಂಘರ್ಷ ತಾರಕಕ್ಕೆ ಏರುತ್ತಿದ್ದು, ಈ ಸಂದರ್ಭದಲ್ಲಿ ಆನೆ ಸವಾಪ್ಪಿರುವುದು ಅನೇಕ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.


ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ಮೋದಿ ಏಕೆ ತುಟಿ ಬಿಚ್ಚುತ್ತಿಲ್ಲ: ಗೌಸ್ ಮುನೀರ್
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಹಾಸನದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಆಝಾದ್ ಪಾರ್ಕ್ ವೃತ್ತದ ಬಳಿ ಪ್ರತಿಭಟನೆಯನ್ನು ನಡೆಸಲಾಯಿತು.
ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ SDPI ಜಿಲ್ಲಾ ಅಧ್ಯಕ್ಷರಾದ ಗೌಸ್ ಮುನೀರ್, ಹಾಸನದಲ್ಲಿ ಮೋದಿಯ ಪರಮಾಪ್ತ ಪಕ್ಷವಾದ ಜೆಡಿಎಸ್ ಸಂಸದ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಮೊಮ್ಮಗ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅಣ್ಣನ ಮಗ ಪ್ರಜ್ವಲ್ ರೇವಣ್ಣ ಸಾವಿರಾರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆಸಿ ಆ ನೀಚ ಕೃತ್ಯಗಳನ್ನು ಚಿತ್ರೀಕರಣ ಮಾಡಿಕೊಂಡಿರುವ ದೂರುಗಳನ್ನು ಸಂತ್ರಸ್ತ ಮಹಿಳೆಯರು ಮಾಡಿದ್ದಾರೆ. ಆ ವಿಡಿಯೋಗಳು ಈಗ ಎಲ್ಲೆಲ್ಲೂ ಹರಿದಾಡುತ್ತಿವೆ. ಇಲ್ಲಿನ ಪ್ರಕರಣಗಳ ಸಂಖ್ಯೆಯನ್ನು ಗಮನಿಸಿದರೆ ಇದು ದೇಶದ ಅತಿ ದೊಡ್ಡ ಸೆಕ್ಸ್ ಸ್ಕ್ಯಾಂಡಲ್ ಅನ್ನುವುದರಲ್ಲಿ ಅನುಮಾನವಿಲ್ಲ. ಈ ನೀಚ ಕೃತ್ಯದಲ್ಲಿ ಜೆಡಿಎಸ್ ಹಿರಿಯ ನಾಯಕ ರೇವಣ್ಣ ಕೂಡ ಭಾಗಿಯಾಗಿರುವ ಆರೋಪ ಮಾಡಲಾಗಿದೆ.
ಕೋಮು ದ್ವೇಷವನ್ನು ಹರಡುವ ಏಕೈಕ ಉದ್ದೇಶದಿಂದ ಹುಬ್ಬಳ್ಳಿಯ ನೇಹಾ ಪ್ರೇಮ ವೈಫಲ್ಯ ಕೊಲೆ ಪ್ರಕರಣವನ್ನು ಹಿಂದೂ-ಮುಸ್ಲಿಂ ಮಾಡಿ ರಾದ್ಧಾಂತ ಮಾಡಿದ ಮೋದಿಯವರು ಈ ಬಗ್ಗೆ ಒಂದೇ ಒಂದು ಮಾತನ್ನೂ ಆಡಿಲ್ಲ ಏಕೆ? ಇಲ್ಲಿ ನೊಂದಿರುವ ಸಾವಿರಾರು ಹೆಣ್ಣುಮಕ್ಕಳು ಹಿಂದೂಗಳಲ್ಲವೇ? ಆರೋಪಿ ಮುಸ್ಲಿಂ ಆಗಿದ್ದರೆ ಮಾತ್ರ ಇವರ ಆಕ್ರೋಶವೇ? ಪಶ್ಚಿಮ ಬಂಗಾಳದ ಸಂದೇಶ್ ಖಾಲಿಯಲ್ಲಿ ಇಂತಹದ್ದೇ ಘಟನೆಯಲ್ಲಿ ಆರೋಪಿ ಮುಸ್ಲಿಂ ಆಗಿದ್ದ ಒಂದೇ ಕಾರಣಕ್ಕೆ ಮಾಧ್ಯಮಗಳು ಅರಚಾಟಡಿದ್ದವು. ಪ್ರಧಾನಿ ಮೋದಿ ಸಂತ್ರಸ್ತ ಮಹಿಳೆಯರನ್ನು ಖದ್ದು ಭೇಟಿ ಮಾಡಿದ್ದರು. ಅವರಲ್ಲಿ ಒಬ್ಬ ಮಹಿಳೆಗೆ ಲೋಕ ಸಭಾ ಚುನಾವಣೆಗೆ ಟಿಕೆಟ್ ಸಹ ನೀಡಿದ್ದಾರೆ.
ಇದನ್ನೂ ಓದಿ: ಮಳೆ ಹಾನಿ; ಗ್ರಾಹಕರ ಸಮಸ್ಯೆ ಪರಿಹಾರಕ್ಕೆ 8 ಜಿಲ್ಲೆಗೆ ವಾಟ್ಸಪ್ ಸಂಖ್ಯೆ; ಜಿಲ್ಲಾವಾರು ನಂಬರ್ ಇಲ್ಲಿದೆ
ರಾಷ್ಟ್ರೀಯ ಮಹಿಳಾ ಆಯೋಗ ಈ ಪ್ರಕರಣದಲ್ಲಿ ಇನ್ನಿಲ್ಲದ ಆಸಕ್ತಿ ತೋರಿಸಿ ಕ್ರಮ ಕೈಗೊಂಡಿತ್ತು. ಆದರೆ ಈಗ ಇದ್ಯಾವುದೂ ಇಲ್ಲ. ರಾಷ್ಟ್ರೀಯ ಮಹಿಳಾ ಆಯೋಗದಿಂದ ಕನಿಷ್ಟ ನೋಟಿಸ್ ಸಹ ಜಾರಿಯಾಗಿಲ್ಲ. ಇದು ಎಂತಹ ಭೇದಭಾವ ಮನಸ್ಥಿತಿ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷ ಈ ನೀಚ ಕೃತ್ಯ ಮತ್ತು ಮೋದಿ ಮತ್ತವರ ಸರ್ಕಾರದ ನಡವಳಿಕೆಯನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.
ಮೂಡಿಗೆರೆ ವಿಧಾನಸಭಾ ಅಧ್ಯಕ್ಷರಾದ ಅಂಗಡಿ ಚಂದ್ರು ಮಾತನಾಡಿ, ಇದೊಂದು ಅಮಾನವೀಯ, ವಿಕೃತಕಾಮಿಯ ಮನಸ್ಥಿತಿಯನ್ನು ಪ್ರದರ್ಶಿಸುವ ಕೃತ್ಯವಾಗಿದೆ. ತನ್ನ ತಾಯಿಯ ವಯಸ್ಸಿನ ಮಹಿಳೆಯರನ್ನು ಕೂಡ ಅವರು ಕೈಮುಗಿದು ಬೇಡುತ್ತಿದ್ದರೂ ಬಿಡದೆ ಅವರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಂಡಿರುವುದನ್ನು ಕೆಲವು ವಿಡಿಯೋಗಳಲ್ಲಿ ನೋಡಬಹುದಾಗಿದೆ. ಅದಷ್ಟೇ ಅಲ್ಲದೆ, ಈ ಎಲ್ಲಾ ವಿಡಿಯೋಗಳನ್ನು ಸ್ವತಃ ಆರೋಪಿ ಪ್ರಜ್ವಲ್ ರೇವಣ್ಣನೇ ರೆಕಾರ್ಡ್ ಮಾಡಿರುವ ಅರೋಪಗಳಿದೆ. ಇದೆಲ್ಲ ನೋಡಿದರೆ ಇದು ವಿಕೃತಕಾಮಿಗಳನ್ನೂ ಮೀರಿಸುವ ಸೈಕೋಪಾತ್ ವರ್ತನೆ ಎಂಬಂತೆ ತೋರುತ್ತಿದೆ. ಇಂತಹ ನೀಚ ಮನಸ್ಥಿತಿಯ ವ್ಯಕ್ತಿ ರಾಜಕಾರಣದಲ್ಲಿ ಮಾತ್ರವಲ್ಲ, ಸಮಾಜದಲ್ಲಿರಲೂ ಸಹ ನಾಲಾಯಕ್ಕಾಗಿರುತ್ತಾನೆ. ಈ ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲಾಗಿದೆ ಎಂದು ಹೇಳಿದ ಪ್ರಜ್ವಲ್ ರೇವಣ್ಣ ತಾವು ನಿರಪರಾಧಿಯಾಗಿದ್ದರೆ ರಾತ್ರೋರಾತ್ರಿ ದೇಶ ತೊರೆದು ಹೋದದ್ದು ಏಕೆಂದು ಹೇಳಬೇಕು. ಜೊತೆಗೆ ಆರೋಪಿ ಪ್ರಜ್ವಲ್ ರೇವಣ್ಣ ದೇಶ ತೊರೆಯಲು ಸಹಕರಿಸಿದವರು ಯಾರು ಎಂಬ ಬಗ್ಗೆಯೂ ತನಿಖೆಯಾಗಬೇಕು ಎಂದು ಹೇಳಿದರು.
ಇದನ್ನೂ ಓದಿ: ಬರ ಪರಿಹಾರ; 16 ಲಕ್ಷ ರೈತರಿಗೆ ತಲಾ 3,000 ರೂ ಜಮೆ; ಯಾರಿಗೆ ಇಲ್ಲಿದೆ ನೋಡಿ ಡಿಟೈಲ್ಸ್
ಎದ್ದೇಳು ಕರ್ನಾಟಕದ ರಾಜ್ಯ ಮುಖಂಡರಾದ ಗೌಸ್ ಮೊಹಿದ್ದೀನ್ ಮಾತನಾಡಿ, ತಮ್ಮ ರಾಜಕೀಯ ಲಾಭಕ್ಕೆ ಮತ್ತು ಮುಸ್ಲಿಮರ ವಿರುದ್ಧ ದ್ವೇಷ ಕಾರುವ ತಮ್ಮ ಯೋಜನೆಯ ಭಾಗವಾಗಿ ಮುಸ್ಲಿಮರು ಆರೋಪಿಯಾಗಿರುವ ಆಯ್ದ ಒಂದೆರಡು ಪ್ರಕರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಗಲಭೆಗಳನ್ನು ಮಾಡುತ್ತದೆ. ಅಂತಹ ನೀಚ ಕೃತ್ಯಕ್ಕೆ ದೇಶದ ಪ್ರಧಾನಿಗಳು ಕೂಡ ಇಳಿದಿದ್ದಾರೆ. ಮೊನ್ನೆ ಹುಬ್ಬಳ್ಳಿಯಲ್ಲಿ ನಡೆದ ಪ್ರೇಮ ವೈಫಲ್ಯದ ಕೊಲೆ ಪ್ರಕರಣವನ್ನು ದೇಶ ಮಟ್ಟದಲ್ಲಿ ಚರ್ಚೆಗೆ ತಂದು ಆ ಮೂಲಕ ಪ್ರಧಾನಿ ಮೋದಿ ಅವರು ತಮ್ಮ ಕೋಮು ದ್ವೇಷದ ನೀಚ ರಾಜಕಾರಣವನ್ನು ಅನಾವರಣಗೊಳಿಸಿದ್ದರು. ದೇಶದಲ್ಲಿ ಪ್ರತಿದಿನ 90 ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತವೆ. ಅವುಗಳ ಬಗ್ಗೆ ಮೋದಿಯವರಿಗೆ ಮಾತನಾಡಲು ಬಾಯಿ ಬರುವುದಿಲ್ಲ. ಅವರದೇ ಪಕ್ಷದ ಸಂಸದ ರಾಷ್ಟ್ರಕ್ಕೆ ಪದಕ ತಂದುಕೊಟ್ಟ ಕ್ರೀಡಾಪಟುಗಳ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಿದಾಗ ಮೋದಿ ಮೌನ ಬಿಟ್ಟು ಬೇರೇನೂ ಮಾಡುವುದಿಲ್ಲ. ಮಣಿಪುರದಲ್ಲಿ ಮಹಿಳೆಯರನ್ನು ಅತ್ಯಾಚಾರ ಮಾಡಿ ಬೆತ್ತಲೆ ಮೆರವಣಿಗೆ ನಡೆಸಿದಾಗಲೂ ಅವರ ಮನಸ್ಸು ಕರಗುವುದಿಲ್ಲ. ಆದರೆ, ಆರೋಪಿ ಮುಸ್ಲಿಂ ಎಂಬ ಏಕೈಕ ಕಾರಣಕ್ಕೆ ಹುಬ್ಬಳ್ಳಿ ಪ್ರಕರಣವನ್ನು ದೇಶದಲ್ಲಿ ಅಶಾಂತಿ ಮೂಡಿಸುವ ಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡುತ್ತಾರೆ. ಹಿಂದೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ ಎಂದು ಅರಚುತ್ತಾರೆ. ಈಗ ಹಾಸನದಲ್ಲಿ ಪ್ರಮುಖ ನಾಯಕನೇ ನಡೆಸಿರುವ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಗೆ ಬಲಿಯಾಗಿರುವ ಹೆಣ್ಣುಮಕ್ಕಳು ಹಿಂದೂಗಳಲ್ಲವೇ? ಅವರಿಗೆ ನ್ಯಾಯ ಕೊಡಿಸುವ ಅವಶ್ಯಕತೆ ಇಲ್ಲವೆ ಎಂದು ಹೇಳಿದರು.
ಇದನ್ನೂ ಓದಿ: ಕಾಫಿ ಮಂಡಳಿಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಪ್ರತಿಭಟನೆಯಲ್ಲಿ SDPI ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಬಾರಕ್, ಜಿಲ್ಲಾ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಚಿಕ್ಕಮಗಳೂರು ವಿಧಾನಸಭಾ ಕಾರ್ಯದರ್ಶಿ ಆರೀಫ್, ಮೂಡಿಗೆರೆ ವಿಧಾನಸಭಾ ಉಪಾಧ್ಯಕ್ಷ ಶರೀಫ್ ಎಂ.ಯೂ, ಜಿಲ್ಲಾ ಸಮಿತಿ ಸದಸ್ಯರುಗಳಾದ ಮುಬಾರಕ್ ಕಲ್ಲಾಪುರ ಹಾಗೂ ಇನ್ನಿತರರು ಇದ್ದರು.













