
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ರೀತಿಸಿ ವಿವಾಹವಾಗಿ ದೂರವಾಗಿದ್ದ ಪತ್ನಿಯನ್ನು ಪತಿಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ. ಕರಕುಚ್ಚಿ ಗ್ರಾಮದ ಮೇಘಾ(20) ಮೃತ ಪತ್ನಿ, ಚರಣ್ ಹತ್ಯೆಗೈದ ಪತಿ.
ಇದನ್ನೂ ಓದಿ: ಮೇ 1 ರಿಂದ ದೇಶಾದ್ಯಂತ ಹೊಸ ರೂಲ್ಸ್ ಜಾರಿ!; ಈ ಎಲ್ಲಾ ನಿಯಮಗಳಲ್ಲಿ ಬದಲಾವಣೆ; ಇಲ್ಲಿದೆ ನೋಡಿ ಡಿಟೈಲ್ಸ್


ಇದನ್ನೂ ಓದಿ: ರೇಷನ್ ಕಾರ್ಡ್ ಇದೆಯಾ?; ಹಾಗದ್ರೆ ಉಚಿತವಾಗಿ ಸಿಗಲಿದೆ ಗ್ಯಾಸ್ ಸ್ಟವ್ ಹಾಗೂ ಗ್ಯಾಸ್ ಸಿಲಿಂಡರ್!; ಇಲ್ಲಿದೆ ನೋಡಿ ಡಿಟೈಲ್ಸ್

ಪ್ರೀತಿಸಿ ಕುಟುಂಬದ ಒಪ್ಪಿಗೆ ಪಡೆದು 2 ವರ್ಷದ ಹಿಂದೆ ಚರಣ್ ಜೊತೆ ಮೇಘಾ ವಿವಾಹವಾಗಿದ್ದರು. ಗಂಡನೊಂದಿಗೆ ಮನಸ್ತಾಪ ಹಿನ್ನೆಲೆ ಮೇಘಾ ತಾಯಿ ಜೊತೆಗಿದ್ದರು. ಬಟ್ಟೆ ತೊಳೆಯಲು ತೆರಳಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಚರಣ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಬಸ್ ಪಲ್ಟಿ: ಆರು ವರ್ಷದ ಬಾಲಕ ಸಾವು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಪ್ರವಾಸಿ ಬಸ್ ಉರುಳಿ ಬಿದ್ದು, ಆರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ನಡೆದಿದೆ. ಮೊಹಮ್ಮದ್ ಸವಾಜ್ (6) ಮೃತ ಬಾಲಕ.
ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಬಂದಿದ್ದ ಪ್ರವಾಸಿಗರು, ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ 23 ಜನರಿಗೆ ಸಣ್ಣಪುಟ್ಟ ಗಾಯ ಹಾಗೂ 6 ಜನರಿಗೆ ಗಂಭೀರ ಗಾಯವಾಗಿದ್ದು, ಆರು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಇನ್ನು ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ನೀವು ವಾಟ್ಸಾಪ್ ಬಳಕೆದಾರರೇ?; ವಾಟ್ಸಾಪ್ನಲ್ಲಿ ನಿಮಗೆ ಇನ್ನಷ್ಟು ಭದ್ರತೆ ಬೇಕೇ?; ಹಾಗಿದ್ರೆ ಈ ಸುದ್ದಿ ಓದಲೇಬೇಕು













