ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) 18ನೇ ಏಷ್ಯನ್ ಹ್ಯಾಂಡ್ಬಾಲ್ ಚಾಂಪಿಯನ್ಶಿಪ್ ಭಾರತ ತಂಡಕ್ಕೆ ಮಲೆನಾಡಿನ ಹುಡುಗ ಆಯ್ಕೆ ಆಗಿದ್ದಾನೆ.
ಇದನ್ನೂ ಓದಿ: ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ

ಹೌದು, ಚಿಕ್ಕಮಗಳೂರಿನ ತಾರಾಮಾಣಿ ಹಾಗೂ ಗಿರೀಶ್ ಅವರ ಪುತ್ರ ಯಶಸ್, 18ನೇ ಏಷ್ಯನ್ ಹ್ಯಾಂಡ್ಬಾಲ್ ಚಾಂಪಿಯನ್ಶಿಪ್ ಅಂಡರ್ 20 ಭಾರತ ತಂಡಕ್ಕೆ ಆಯ್ಕೆ ಆಗಿದ್ದಾನೆ. ಜುಲೈ 14 ರಿಂದ 26 ರ ವರೆಗೆ ಜೋರ್ಡಾನ್ ರಾಜಧಾನಿ ಅಮ್ಮಾನ್ನಲ್ಲಿ ಈ ಚಾಂಪಿಯನ್ ಶಿಪ್ ಗೆ ನಡೆಯಲಿದ್ದು, ಚಿಕ್ಕಮಗಳೂರು ಜಿಲ್ಲೆಯಿಂದ ಪ್ರಪ್ರಥಮವಾಗಿ ಹ್ಯಾಂಡ್ಬಾಲ್ ಕ್ರೀಡೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸುವ ಅವಕಾಶ ಯಶಸ್ ಅವರಿಗೆ ದೊರೆತಿದೆ. ಅಲ್ಲದೆ ಭಾರತ ತಂಡಕ್ಕೆ ಆಯ್ಕೆಯಾದ ಏಕೈಕ ಕನ್ನಡಿಗನೂ ಯಶಸ್ ಆಗಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ 1.70 ಲಕ್ಷ ಮಹಿಳೆಯರಿಗೆ ಬರಲ್ಲ ಗೃಹಲಕ್ಷ್ಮಿಯ 2000 ಹಣ!
ಯಶಸ್ ಚಿಕ್ಕಮಗಳೂರು ನಗರದ ಎಐಟಿ ಕಾಲೇಜಿನಲ್ಲಿ 2ನೇ ವರ್ಷದ BE ವಿದ್ಯಾಭ್ಯಾಸ ಮಾಡುತ್ತಿದ್ದು, 5 ಬಾರಿ ಹ್ಯಾಂಡ್ಬಾಲ್ನಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ, ಕಳೆದ ಬಾರಿ ಕರ್ನಾಟಕ ತಂಡದ ನಾಯಕನಾಗಿ ಆಯ್ಕೆಯಾಗಿದ್ದರು.
ಇದನ್ನೂ ಓದಿ: ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ; 1.73 ಲಕ್ಷ BPL ರೇಷನ್ ಕಾರ್ಡ್ ವಿತರಣೆ















