
ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಕೊಪ್ಪದ ಬಸ್ತಿ ಬಾಳಕ್ಕಿ ತೋಟದ ಮಾಲೀಕ ಸುರೇಶ್, ಆತ್ಮಹತ್ಯೆಗೂ ಮುನ್ನ ಮಾಡಿರುವ ವಿಡಿಯೊವನ್ನು ಈ ಹಿಂದೆ ಪತ್ರಿಕಾಗೋಷ್ಠಿ ನಡೆಸಿ ಬಹಿರಂಗ ಪಡಿಸಿದ್ದರು. ಈ ಸಂಬಂಧ ಜಯಪುರ ಪೋಲಿಸ್ ಠಾಣೆಯಲ್ಲಿ 6 ಜನರ ವಿರುದ್ಧ FIR ದಾಖಲಿಸಲಾಗಿತ್ತು. ಆದರೆ, ಇದೀಗ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡರ ಆಪ್ತರೊಬ್ಬರು ರಾಘವೇಂದ್ರ ಎಂಬುವವರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ

ಏನಿದು ಘಟನೆ:
2023 ರ ಅಕ್ಟೋಬರ್ 2 ರಂದು ಕೊಪ್ಪದ ಬಸ್ತಿ ಬಾಳಕ್ಕಿ ತೋಟದ ಮಾಲೀಕ ಸುರೇಶ್, ರಾಘವೇಂದ್ರ ಎಂಬುವವರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ, ಸುರೇಶ್ ಆತ್ಮಹತ್ಯೆಗೂ ಮುನ್ನ ಮಾಡಿರುವ ವಿಡಿಯೋವನ್ನ ಕಳೆದ ತಿಂಗಳು ಪತ್ರಿಕಾಗೋಷ್ಠಿ ನಡೆಸಿ ಬಹಿರಂಗ ಪಡಿಸಿದ್ದರು. ಆ ವಿಡಿಯೋದಲ್ಲಿ ಬಸ್ತಿ ಬಾಳಕ್ಕಿಯಲ್ಲಿ 3.5 ಎಕರೆ ಜಾಗದ ವಿಚಾರವಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡರೊಬ್ಬರು ಹಾಗೂ ಕೆಲ ವ್ಯಕ್ತಿಗಳು ನೀಡಿದ ಕಿರುಕುಳ ಹಾಗೂ ಹಲ್ಲೆಯಿಂದ ಮಾನಸಿಕವಾಗಿ ನೊಂದು ಸುರೇಶ್ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಹಲ್ಲೆಗೆ ಪ್ರತ್ಯಕ್ಷ ಸಾಕ್ಷಿಯಾಗಿ ರಾಘವೇಂದ್ರ ಇದ್ದು, ಜಯಪುರ ಠಾಣೆಯಲ್ಲಿ ಎಸ್ಸಿ.ಎಸ್.ಟಿ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.


ಆದರೆ ಇದೀಗ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡರ ಆಪ್ತರೊಬ್ಬರು ರಾಘವೇಂದ್ರ ವಿರುದ್ಧ FIR ದಾಖಲಿಸುವುದಾಗಿ ಫೋನ್ ಮೂಲಕ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಆತ್ಮಹತ್ಯೆ ವಿಚಾರದಲ್ಲಿ ಅಪರಾದಿಗಳು ಮತ್ತು ಶಾಸಕರು ಸೇರಿಕೊಂಡು ಕೇಸನ್ನು ಮುಚ್ಚಿ ಹಾಕುವ ಅನುಮಾನವನ್ನು ವ್ಯಕ್ತಪಡಿಸಿ, ಮಾನ್ಯ ಮುಖ್ಯಮಂತ್ರಿಗಳು ಸಿಬಿಐ ಗೆ ಈ ಪ್ರಕರಣವನ್ನು ಒಪ್ಪಿಸುವಂತೆ ಒತ್ತಾಯಿಸಿದ್ದಾರೆ. ಹಾಗೂ ಮುಂದಿನ ದಿನಗಳಲ್ಲಿ ವಿವಿಧ ಸಂಘಟನೆಯೊಂದಿಗೆ ಹಿಡುವಳಿಯ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡುವುದರ ಜೊತೆಗೆ ಕಾನೂನನ್ನು ದುರುಪಯೋಗ ಮಾಡಿಸಿಕೊಂಡಲ್ಲಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಇದನ್ನೂ ಓದಿ: ರೈತರಿಗೆ ಡಬಲ್ ಧಮಾಕಾ!; ಇಂತಹ ರೈತರ ಬ್ಯಾಂಕ್ ಖಾತೆಗೆ 9,500 ರೂಪಾಯಿ ಜಮಾ
ಎನ್.ಆರ್.ಪುರ: ಕಾಫಿನಾಡ ಮಹಾಮಳೆಗೆ ಮೂರನೇ ಬಲಿ
ಎನ್.ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ಮರ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ನಡೆದಿದೆ. ಕೊಪ್ಪ ಮೂಲದ ಸವಿತಾ (48) ಮೃತ ದುರ್ದೈವಿ.
ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಮಹತ್ವದ ಮಾಹಿತಿ; RBI ನಿಂದ ಮತ್ತೆ ನಿಯಮ ಬದಲಾವಣೆ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಭಾರೀ ಗಾಳಿ-ಮಳೆಗೆ ಮಹಿಳೆ ಹಾಗೂ ಕಾರಿನ ಮೇಲೆ ಏಕಕಾಲಕ್ಕೆ ಮರ ಬಿದ್ದಿದೆ. ಪರಿಣಾಮ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮೂವರಿಗೂ ಗಂಭೀರ ಗಾಯವಾಗಿದೆ. ಕಾರಿನ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ತಕ್ಷಣವೇ ಗಾಯಾಳುಗಳನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ನಿಮ್ಮ ಖಾತೆಗೆ ಶೀಘ್ರವೇ ಬರಲಿದೆ ಪಿಎಂ ಕಿಸಾನ್ ಹಣ!
ಇನ್ನು ಮುಂಗಾರು ಪೂರ್ವ ಬಿರುಗಾಳಿ ಮಳೆಗೆ ಇದು ಮೂರನೇ ಬಲಿಯಾಗಿದ್ದು, ಕಳೆದ ಒಂದು ತಿಂಗಳ ಅಂತರದಲ್ಲಿ ಮರ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.













