ಚಿಕ್ಕಮಗಳೂರು ನಗರಸಭೆ ಆಡಳಿತ ಸಂಬಂಧ SDPI ಜೊತೆಗೆ ಕೈಜೋಡಿಸಿದ ಬಿಜೆಪಿ

 

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ನಗರಸಭೆಯಲ್ಲಿ ಬಿಜೆಪಿ ಸದಸ್ಯರು ಎಸ್‌ಡಿಪಿಐ ಬೆಂಬಲ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ;  ಈ ದಿನ ರೈತರ ಖಾತೆಗೆ ಬರಲಿದೆ 15ನೇ ಕಂತಿನ ಹಣ; ಹಣ ರಿಲೀಸ್‌ ಗೆ ಡೇಟ್‌ ಫಿಕ್ಸ್‌

ಮಾಜಿ ಸಚಿವ ಸಿ.ಟಿ.ರವಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಸ್ಥಳೀಯ ಬಿಜೆಪಿ ನಾಯಕರು ಎಸ್‌ಡಿಪಿಐ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಹಾಲಿ ನಗರಸಭಾಧ್ಯಕ್ಷ ವೇಣುಗೋಪಾಲ್ ಅವರನ್ನು ಕೆಳಗಿಳಿಸಲು ಬದ್ಧವೈರಿಗಳ ಜೊತೆಯಲ್ಲಿ ಕೈ ಜೋಡಿಸಲು ಕಮಲ ನಾಯಕರು ಮುಂದಾಗಿದೆ ಎನ್ನಲಾಗಿದೆ.

 

ಇದನ್ನೂ ಓದಿ; 15ನೇ ಕಂತಿನ ಹಣ ಪಡೆಯುವವರ ಹೆಸರು ಬಿಡುಗಡೆ;  ಈ ಕೆಲಸ ಮಾಡದಿದ್ದರೆ ಖಾತೆಗೆ ಹಣ ಬರಲ್ಲ

ಬಿಜೆಪಿ ಪಕ್ಷದ ಆಂತರಿಕ ಒಪ್ಪದ ಪ್ರಕಾರ, ಸಿ.ಟಿ.ರವಿ ಅವರ ಆಪ್ತರಾಗಿರುವ ವೇಣುಗೋಪಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು. ಆದರೆ ರಾಜೀನಾಮೆ ನೀಡದ ಹಿನ್ನೆಲೆ ಇನ್ನುಳಿದ ಬಿಜೆಪಿ ಸದಸ್ಯರು ವೇಣುಗೋಪಾಲ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಮುಂದಾಗಿದ್ದು, ಈ ಹಿನ್ನೆಲೆ ಎಸ್‌ಡಿಪಿಐ ಬೆಂಬಲ ಕೇಳಿದೆ ಎನ್ನಲಾಗಿದೆ.

 

ಚಿಕ್ಕಮಗಳೂರು: ದತ್ತಮಾಲ ಅಭಿಯಾನ | ಎಲ್ಲೆಡೆ ಬಿಗಿ ಬಂದೋಬಸ್ತ್

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಶ್ರೀರಾಮ ಸೇನೆ ನಡೆಸುತ್ತಿರುವ ದತ್ತಮಾಲಾ ಅಭಿಯಾನದ ಭಾಗವಾಗಿ ಭಾನುವಾರ ಶೋಭಾಯಾತ್ರೆ ನಡೆಯಲಿದ್ದು, ಭದ್ರತೆ ಸೇರಿ ಅಹಿತಕರ ಘಟನೆಗಳಿಗೆ ಅವಕಾಶ ಆಗದಂತೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

 

ಜಿಲ್ಲಾಡಳಿತದಿಂದ ಭದ್ರತೆ:
ಅಭಿಯಾನದ ಅಂತಿಮ ದಿನವಾದ ಭಾನುವಾರ ನಗರದ ಶಂಕರಮಠದಿಂದ ಎಂ.ಜಿ.ರಸ್ತೆ ಮೂಲಕ ಅಜಾದ್ ಪಾರ್ಕ್ ತನಕ ಶೋಭಾಯಾತ್ರೆ ನಡೆಯಲಿದೆ. ಬಳಿಕ ಮಾಲಾಧಾರಿಗಲು ಚಂದ್ರದ್ರೋಣ ಪರ್ವತ ಏರಿ ಇನಾಂ ದತ್ತಾತ್ರೇಯ ಪೀಠ (ಐ.ಡಿ. ಪೀಠ) ವ್ಯಾಪ್ತಿಯಲ್ಲಿ ಸತ್ಯ ದತ್ತವ್ರತ ಮತ್ತು ದತ್ತ ಹೋಮದಲ್ಲಿ ಭಾಗವಹಿಸಲಿದ್ದಾರೆ. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಾಲಾಧಾರಿಗಳು ಭಾಗವಹಿಸುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಊಹಿಸಿದೆ. ಸೂಕ್ತ ಭದ್ರತೆ ಒದಗಿಸಲು ತಯಾರಿ ನಡೆಸಿದೆ.

ಒಂದೂವರೆ ಸಾವಿರ ಪೊಲೀಸರ ನಿಯೋಜನೆ:
ದತ್ತಮಾಲ ಅಭಿಯಾನಕ್ಕೆ ಭದ್ರತೆ ಒದಗಿಸಲು ಹೊರ ಜಿಲ್ಲೆಯ ಒಂದೂವರೆ ಸಾವಿರ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. 6 ಡಿವೈಎಸ್‌ಪಿ, 20 ಇನ್‌ಸ್ಪೆಕ್ಟರ್‌ಗಳು, 89 ಸಬ್ ಇನ್ ಸ್ಪೆಕ್ಟರ್, 141 ಎ.ಎಸ್.ಐಗಳು, 956 ಹೆಡ್ ಕಾನ್ ಸ್ಟೆಬಲ್ ಮತ್ತು ಕಾನ್ ಸ್ಟೆಬಲ್ ಗಳು, 250 ಗೃಹ ರಕ್ಷಕ ಸಿಬ್ಬಂದಿ, 8 ಕೆಎಸ್‌ಆರ್‌ಪಿ ತುಕಡಿ ಮತ್ತು 12 ಸಶಸ್ತ್ರ ಮೀಸಲುಪಡೆ ತಕಡಿ ನಿಯೋಜಿಸಲಾಗಿದೆ. 80 ಸೆಕ್ಷನ್ ಪಾಯಿಂಟ್ ಗಳನ್ನು ಗುರುತಿಸಲಾಗಿದೆ. ಪಾಯಿಂಟ್ ಗಳ ಸೂಕ್ಷ್ಮತೆ ಆಧರಿಸಿ ಅಲ್ಲಿಗೆ ಎಷ್ಟು ಸಿಬ್ಬಂದಿ ನಿಯೋಜಿಸಬೇಕು ಎಂಬುದನ್ನು ತೀರ್ಮಾನಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 26 ಚೆಕ್‌ಪೋಸ್ಟ್:
ಜಿಲ್ಲೆಯ ಗಡಿಭಾಗ ನಗರ ಮತ್ತು ಗಿರಿಭಾಗ ಸೇರಿ ಒಟ್ಟು 26 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ಜಿಲ್ಲೆಯಾದ್ಯಂತ 49 ಸೆಕ್ಟರ್ ಮ್ಯಾಜಿಸ್ಟ್ರೇಟ್ ಗಳನ್ನು ನೇಮಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಹೊರ ಜಿಲ್ಲೆಗಳಿಂದ ಬರುವ ವಾಹನಗಳ ತಪಾಸಣೆಗೆ ಗಡಿಯಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು ಇನ್ನೆರಡು ದಿನ ಜಿಲ್ಲೆಗೆ ಬರುವ ವಾಹನಗಳ ಮೇಲೆ ಪೊಲೀಸರು ನಿಗಾ ಇಡಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಮೂರು ದಿನ ಪ್ರವಾಸ ನಿರ್ಬಂಧ:
ದತ್ತಮಾಲಾ ಅಭಿಯಾನದ ಅಂಗವಾಗಿ ನ.೪ರಿಂದ (ಶನಿವಾರ) ನ.6ರ ಬೆಳಿಗ್ಗೆ 10 ಗಂಟೆ ತನಕ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿ ಐ.ಡಿ ಪೀಠ ಮಾಣಿಕ್ಯಧಾರಾ ಜಲಪಾತ ಗಾಳಿಕೆರೆ ಪ್ರವಾಸಿತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಶ್ರೀರಾಮ ಸೇನೆ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ದಟ್ಟಣೆ ಉಂಟಾಗುವ ಕಾರಣಕ್ಕೆ ಬೇರೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.