ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಭಾರೀ ಅಂತರದ ಮುನ್ನಡೆ ಸಾಧಿಸಿದ್ದಾರೆ.
ಇದನ್ನೂ ಓದಿ: ರೈತರೇ ಗಮನಿಸಿ; ಪಿಎಂ ಫಸಲ್ ಭೀಮಾ ಯೋಜನೆ; ಈ ಯೋಜನೆಯ ಉದ್ದೇಶವೇನು? ಅರ್ಜಿ ಸಲ್ಲಿಕೆ ಹೇಗೆ?

ಸಧ್ಯ ಸುಮಾರು 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿರುವ ಕೋಟಾ ಶ್ರೀನಿವಾಸ ಪೂಜಾರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ..

ಇದನ್ನೂ ಓದಿ: ಹಣ ಉಳಿತಾಯ ಮಾಡುವ ಪೋಷಕರಿಗೆ ಮಹತ್ವದ ಮಾಹಿತಿ; ಪೋಸ್ಟ್ ಆಫೀಸ್ ನಲ್ಲಿ 6 ರೂಪಾಯಿ ಉಳಿಸಿದ್ರೆ ಸಿಗತ್ತೆ 3 ಲಕ್ಷ
ನನ್ನ ಗೆಲುವಿಗೆ ಸಹಕರಿಸಿದ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಮತ್ತು ರಾಷ್ಟ್ರೀಯ ನಾಯಕರಿಗೆ ಧನ್ಯವಾದ ತಿಳಿಸುತ್ತೇನೆ, ಹಾಗೆಯೇ ಕಾಂಗ್ರೆಸ್ ಮುಖಂಡರು ನನಗೆ ಹಿಂದಿ ಬರುವುದಿಲ್ಲ ಎಂದಿದ್ದರು, ಮುಂದಿನ 6 ತಿಂಗಳ ಒಳಗಾಗಿ ಹಿಂದಿ ಕಲಿತು ಸಂಸತ್ತಿನಲ್ಲಿ ಮಾತನಾಡುತ್ತೇನೆ. ಆದರೆ ನನ್ನ ಬಗ್ಗೆ ಟೀಕೆ ಮಾಡಿದವರ ಮುಂದಿನ ರಾಜಕೀಯ ಭವಿಷ್ಯ ಯಾವ ಪಕ್ಷದಲ್ಲಿ ಎಂದು ನೋಡಿಕೊಳ್ಳಲಿ ಎಂದು ಟಾಂಗ್ ನೀಡಿದರು.
ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಭರ್ಜರಿ ಜಾಬ್ ಆಫರ್; 25 ,000 ದಿಂದ 45.000 ರ ವರೆಗೆ ಸಂಬಳ













