ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಜಿಂಕೆಯನ್ನು ಭೇಟೆಯಾಡಿ ಕಾರಿನಲ್ಲಿ ಸಾಗಿಸುತ್ತಿದ್ದವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಿಂಕೆ ಕಳೇಬರ ಹಾಗೂ ಕಾರನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ: 4-6ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ, ಏನದು?

ಬಾಳೆಹೊನ್ನೂರು ಭಾಗದಿಂದ ನರಸಿಂಹರಾಜಪುರದ ಕಡೆಗೆ ಬರುತ್ತಿದ್ದಾಗ ಚಿಕ್ಕ ಅಗ್ರಹಾರದ ಸಮೀಪ ಅರಣ್ಯ ಇಲಾಖೆ ಸಿಬ್ಬಂದಿ ಕಾರನ್ನು ತಡೆದಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳ ಶೋಧ ಕಾರ್ಯ ಮುಂದುವರಿದಿದೆ. ಗುಬ್ಬಿಗಾ ಗ್ರಾಮದ ಜಿ.ಎನ್. ಭರತ್ ಹಾಗೂ ಇತರರ ಮೇಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಮಿಸ್ ಮಾಡ್ದೆ ಈ ಸುದ್ದಿ ಓದಿ
ಕಾರ್ಯಾಚರಣೆಯಲ್ಲಿ ಚಿಕ್ಕಅಗ್ರಹಾರ ಉಪ ವಲಯ ಅರಣ್ಯಾಧಿಕಾರಿ ಎಚ್.ಬಿ.ನಂದೀಶ, ಕುದುರೆಗುಂಡಿ ಉಪ ವಲಯ ಅರಣ್ಯಾಧಿಕಾರಿ ರಂಗನಾಥ ಅತಾಲಟ್ಟಿ, ಗಸ್ತು ಅರಣ್ಯ ಪಾಲಕರಾದ ರಂಗಸ್ವಾಮಿ, ಸಿದ್ದೇಶ್, ಪ್ರತಾಪ್, ಅರಣ್ಯ ವೀಕ್ಷಕರಾದ ರವಿ, ಗಣೇಶ್, ವಾಹನ ಚಾಲಕ ಜಗದೀಶ್ ಇದ್ದರು.
ಇದನ್ನೂ ಓದಿ: 10-12 ನೇ ತರಗತಿ ಪಾಸಾದವರಿಗೆ ಹೈಕೋರ್ಟ್ನಲ್ಲಿ ಜಾಬ್















