
ಶೃಂಗೇರಿ ರೋಟರಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಡಾ.ಕೆ.ಸಿ.ನಾಗೇಶ್ ಹಾಗೂ ನೂತನ ಕಾರ್ಯದರ್ಶಿ ಆಗಿ ಸುರೇಶ್ ಹೆಗ್ಡೆ ಅವರು ಆಯ್ಕೆ ಆಗಿದ್ದಾರೆ.
ಇದನ್ನೂ ಓದಿ: 10th ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ

ರೋಟರಿ ಭವನದಲ್ಲಿ ನಡೆದ ಹೊಸ ಸಾಲಿನ ನಿಯೋಜಿತ ಪದಾಧಿಕಾರಿಗಳ ಪರಿಚಯದ ಕಾರ್ಯಕ್ರಮದಲ್ಲಿ ಹಾಲಿ ಅಧ್ಯಕ್ಷ ಕೆ.ಸಿ.ಚರಣ್ ಈ ಕುರಿತು ಮಾಹಿತಿ ನೀಡಿದ್ದು, ರೋಟರಿ ಸಂಸ್ಥೆ ಸ್ಥಾಪನೆಗೊಂಡು 25 ವರ್ಷ ಆಗುತ್ತಿದ್ದು, ರಜತ ವರ್ಷಾಚರಣೆಯ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಡಾ.ಕೆ.ಸಿ.ನಾಗೇಶ್ ಹಾಗೂ ನೂತನ ಕಾರ್ಯದರ್ಶಿ ಆಗಿ ಸುರೇಶ್ ಹೆಗ್ಡೆ ನಿಯೋಜನೆಗೊಂಡಿದ್ದಾರೆ ಎಂದು ತಿಳಿಸಿದರು.

ಇನ್ನು ನೂತನ ಅಧ್ಯಕ್ಷ ನಾಗೇಶ್ ಮಾತನಾಡಿ, ಜುಲೈ 7 ರಂದು ರೈತ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ಆಯ್ಕೆ ಮಾಡಿದ ಸಮಿತಿಗೆ ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಬಿಜಿಎಸ್ ವಿದ್ಯಾಲಯದ ಪ್ರಾಂಶುಪಾಲರಾದ ನಾಗೇಶ ಸ್ನೇಹ ಮಾತನಾಡಿ, ಸಂಘಟನೆ ಮತ್ತು ಕಾರ್ಯಕ್ರಮಗಳ ವಿಚಾರದಲ್ಲಿ ಅನುಭವಿಗಳಾಗಿದ್ದು, ಮುಂದಿನ ಸಾಲಿನಲ್ಲಿ ರೋಟರಿ ಹಿರಿಮೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುವರು ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಈ ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ರಾಜ್ಯಪಾಲ ಹೆಚ್.ಎಸ್. ನಟೇಶ್, ಕಾರ್ಯದರ್ಶಿ ಗೌತಮ್ ಎನ್ ಹಾಗೂ ಇನ್ನರ್ ವ್ಹೀಲ್ ಪದಾಧಿಕಾರಿಗಳು ಇದ್ದರು.
ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಇಂದು ಮೂಡಿಗೆರೆ ತಾಲ್ಲೂಕಿನ ಬಿದ್ರಹಳ್ಳಿ ಸಮೀಪ ಎರ್ಟಿಗ ವಾಹನವೊಂದು ಪಲ್ಟಿಯಾದ ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ನೀರು ನಿಂತ ಕಾರಣದಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನವು ಪಲ್ಟಿ ಹೊಡೆದಿದೆ.













