
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದತ್ತಪೀಠದಲ್ಲಿ ನಡೆಯಲಿರುವ ದತ್ತಜಯಂತಿ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ ಸೇರಿದಂತೆ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.
ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಜಿಬಿಎ ಗುಡ್ನ್ಯೂಸ್; ಮಧ್ಯವರ್ತಿಗಳ ಹಾವಳಿ ಸೇರಿ ಭ್ರಷ್ಟಾಚಾರಕ್ಕೂ ಬ್ರೇಕ್

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಡಿಸೆಂಬರ್ 1 ರಿಂದ 4 ರವರೆಗೆ ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮತ್ತು ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ.

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೇತೃತ್ವದಲ್ಲಿ ಡಿಸೆಂಬರ್ 2, 3, ಮತ್ತು 4 ರಂದು ದತ್ತಜಯಂತಿ ಸಂಭ್ರಮ ನಡೆಯಲಿದೆ. ಡಿಸೆಂಬರ್ 5ರ ಬೆಳಗ್ಗೆ 10 ಗಂಟೆ ಬಳಿಕ ಮುಳ್ಳಯ್ಯನಗಿರಿ ಭಾಗ ಪ್ರವಾಸಿಗರಿಗೆ ಮುಕ್ತವಾಗಲಿದೆ.
ಇದನ್ನೂ ಓದಿ: PM ಕಿಸಾನ್ ಯೋಜನೆಯಿಂದ 35 ಲಕ್ಷ ರೈತರ ಹೆಸರು ಡಿಲೀಟ್













