ಬಣಕಲ್: (ನ್ಯೂಸ್ ಮಲ್ನಾಡ್ ವರದಿ) ಸದಾ ಪ್ರವಾಸಿಗರಿಂದ ಗಿಜಿಗುಡುವ ರಾಣಿಝರಿ ಬಲ್ಲಾಳರಾಯನ ದುರ್ಗದಲ್ಲಿ ಶನಿವಾರ ಪರಿಸರ ಸಂರಕ್ಷಣೆಯ ಕುರಿತು ತೇಜಸ್ವಿ ಅವರ ಕೃತಿಗಳ ಓದಿನ ಸದ್ದು ಎಲ್ಲೆಡೆ ಮನೆ ಮಾಡಿತ್ತು.
ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್ KYC ಆಗಿದ್ಯಾ?;ಈ ದಿನದೊಳಗೆ ಫಾಸ್ಟ್ ಟ್ಯಾಗ್ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್ ಲೈನ್

ಕೊಟ್ಟಿಗೆಹಾರದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ರಾಣಿಝರಿ ಬಲ್ಲಾಳರಾಯನ ದುರ್ಗದಲ್ಲಿ ಆಯೋಜಿಸಿದ್ದ ಕಾಡಿನಲ್ಲಿ ಓದು ನಡಿಗೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿದೆಡೆಯಿಂದ ಆಗಮಿಸಿದ ಚಾರಣಿಗರು ಸುತ್ತ ಕಣ್ಣು ಆಯಿಸಿದಷ್ಟು ದೂರವೂ ಹಬ್ಬಿರುವ ಹಸಿರು ಅರಣ್ಯದ ನಡುವೆ ಒಂದೆಡೆ ಸೇರಿ ತೇಜಸ್ವಿ ಕೃತಿಗಳ ಕೆಲ ಸಾಲುಗಳನ್ನು ಓದಿದರು.

ಇದನ್ನೂ ಓದಿ; ಶಿವಮೊಗ್ಗ GTTC ಯಲ್ಲಿ ಉದ್ಯೋಗವಕಾಶ; ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ ಏನು?
ಕೀಟತಜ್ಞರಾದ ಮೂಡಿಗೆರೆಯ ಅವಿನಾಶ್ ಮಾತನಾಡಿ, ಪರಿಸರದ ಬಗ್ಗೆ ಬೆರಗು ಮತ್ತು ಪರಿಸರದ ಉಳಿವಿನ ಮಹತ್ವವನ್ನು ತೇಜಸ್ವಿ ಅವರು ತಮ್ಮ ಬಹುತೇಕ ಕೃತಿಗಳಲ್ಲಿ ಪ್ರತಿಪಾದಿಸಿದ್ದಾರೆ. ತೇಜಸ್ವಿ ಕೃತಿಗಳಿಂದಾಗಿ ಹೊಸದೊಂದು ಓದುಗ ವರ್ಗ ಸೃಷ್ಠಿಯಾಗಿ ಓದಿನ ರುಚಿ ಎಲ್ಲರಲ್ಲೂ ಮೂಡುತ್ತಿದೆ. ಪರಿಸರ, ಜೀವಸಂಕುಲ, ಬಾಹ್ಯಾಕಾಶ, ಮುಂತಾದ ವಿಷಯಗಳ ಬಗ್ಗೆ ತೇಜಸ್ವಿ ಅವರು ತಮ್ಮ ಕೃತಿಗಳಲ್ಲಿ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದರು.
ಮಂಡ್ಯದ ಅಂಶು ಅವರು ಪರಿಸರದ ಕಥೆ, ಚಿಕ್ಕಮಗಳೂರಿನ ಕಾರ್ತಿಕ್ ಎಂ.ಕೆ ಹುಲಿಯೂರಿನ ಸರಹದ್ದು, ದೀಪಗೌಡ ಅವರು ಪಾಕಕ್ರಾಂತಿ, ತುಮಕೂರಿನ ಪಲ್ಲವಿ ರಂಗನಾಥ್ ಮಾಯಾಲೋಕ, ಚಿತ್ರದುರ್ಗದ ದಿನೇಶ್ ಕೆ.ಎಸ್ ಅವರು ಮಿಸ್ಸಿಂಗ್ ಲಿಂಕ್, ಬೆಂಗಳೂರಿನ ಪ್ರೇಮ ಅವರು ಹೆಜ್ಜೆ ಮೂಡದ ಹಾದಿ, ಬೆಂಗಳೂರಿನ ಸುನಿತಾ ಮತ್ತು ವಿನೋದ್ ಅವರು ವಿಸ್ಮಯ ವಿಶ್ವ, ಶಿರಾದ ಶ್ರೀನಾಥ್ ಅವರು ಪಾಕಕ್ರಾಂತಿ, ಮೂಡಿಗೆರೆಯ ಅವಿನಾಶ್ ಅವರು ಪಾಕಕ್ರಾಂತಿ, ನಂದೀಶ್ ಬಂಕೇನಹಳ್ಳಿ ಅವರು ಕರ್ವಾಲೊ, ಕೃತಿಯನ್ನು ಓದಿದರು. ಚಿಕ್ಕಮಗಳೂರಿನ ಸತ್ಯನಾರಾಯಣ, ಓಂಕಾರಪ್ಪ, ಹಾಸನದ ಬಾಲು ತೇಜಸ್ವಿ ಅವರ ಬದುಕು ಬರಹದ ಕುರಿತು ಚರ್ಚೆ ನಡೆಸಿದರು.
ಪರಿಸರದ ಸಂರಕ್ಷಣೆ, ತೇಜಸ್ವಿ ಅವರ ಬದುಕು, ಬರಹಗಳ ಬಗ್ಗೆ ವಿಚಾರ ವಿನಿಮಯ ನಡೆಯಿತು. ಕಾಡಿನಲ್ಲಿ ಓದು ಕಾರ್ಯಕ್ರಮಕ್ಕೂ ಮುನ್ನ ರಾಣಿಝರಿಯಿಂದ ಬಲ್ಲಾಳರಾಯನ ದುರ್ಗಕ್ಕೆ ಚಾರಣ ನಡೆಸಲಾಯಿತು. ಕೀಟತಜ್ಞರಾದ ಅವಿನಾಶ್ ಅವರು ಕೀಟಗಳ ಬಗ್ಗೆ ಮಾಹಿತಿ ನೀಡಿದರು. ಪ್ಲಾಸ್ಟಿಕ್ ನ್ನು ಎಲ್ಲಿಯೂ ಬಳಕೆ ಮಾಡದೇ ಪ್ಲಾಸ್ಟಿಕ್ ಮುಕ್ತ ಚಾರಣ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಕೀಟ ತಜ್ಞರಾದ ಅವಿನಾಶ್, ತೇಜಸ್ವಿ ಅವರ ಒಡನಾಡಿ ಹಾಗೂ ಕಲಾವಿದರಾದ ಬಾಪುದಿನೇಶ್, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿಗಳಾದ ಸತೀಶ್ ತರುವೆ, ಸಂಗೀತಾ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಅಭಿಲಾಷ್, ಚಂದನ್ ಸಿಬ್ಬಂದಿ ಭವಿತ್ ಹಾಗೂ ರಾಜ್ಯದ ವಿವಿದೆಡೆಯಿಂದ ಆಗಮಿಸಿದ 40 ಕ್ಕೂ ಹೆಚ್ಚು ಚಾರಣಿಗರು ಇದ್ದರು.
ಬಿಜೆಪಿ ಸಂಸದನನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕನ ಮನವಿ
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನುಂಟು ಮಾಡಿದೆ.
ಶಿವಮೊಗ್ಗದ ಬೆಕ್ಕಿನ ಕಲ್ಮಟದಲ್ಲಿ ಆಯೋಜಿಸಿರುವ ಗುರು ಬಸವಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಭಾವೈಕ್ಯತ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿದ್ದೇನೆ. ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯವಾಗಿದೆ.
ಇದನ್ನೂ ಓದಿ; ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
ಬಿ.ವೈ ರಾಘವೇಂದ್ರ ಅವರಂಥ ಲೋಕಸಭಾ ಸದಸ್ಯರನ್ನು ಪಡೆದಿರುವ ನೀವೇ ಧನ್ಯರು. ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆಯಾಗಬೇಕು. ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸದಸ್ಯರನ್ನು ಮುಂಬರುವ ಚುನಾವಣೆಯಲ್ಲೂ ಗೆಲ್ಲಿಸಬೇಕು. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ.
ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿರುವ ಸಾಮಾನ್ಯ ಕಾರ್ಯಕರ್ತರು ಎಲ್ಲಾ ಪಕ್ಷಗಳ ಮುಖಂಡರುಗಳ ಹಣೆಬರಹ ಇದು, ತಾಲ್ಲೂಕು ಮಟ್ಟದಿಂದ ರಾಜ್ಯ ಮಟ್ಟದಲ್ಲೂ ಸಹ ಇಂತಹ ವಾತಾವರಣ ಇದೆ, ಕಾರ್ಯಕರ್ತರನ್ನು ಮಾತ್ರ ಬಲಿಪಶು ಮಾಡುತ್ತಾರೆ, ಈಗಿನ ಘಟನೆ ದೊಡ್ಡವರ ಹೊಂದಾಣಿಕೆ ರಾಜಕಾರಣಕ್ಕೆ ಉದಾಹರಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.













