ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಚಾರ್ಮಾಡಿ ಘಾಟ್ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ದೇವನಗುಲ್ ಗ್ರಾಮದ ಅಡ್ಡದಾರಿ ಇತ್ತೀಚೆಗೆ ಅಕ್ರಮ ಚಟುವಟಿಕೆಗಳ ತಾಣವಾಗಿ ಪರಿಣಮಿಸಿತ್ತು. ರಾತ್ರಿ ವೇಳೆ ಸಂಶಯಾಸ್ಪದ ಸಾರಿಗೆ, ಕಾನೂನು ಉಲ್ಲಂಘನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಕಟ್ಟುನಿಟ್ಟಿನ ಹೆಜ್ಜೆ ಇಟ್ಟಿದ್ದಾರೆ.
ಇದನ್ನೂ ಓದಿ: ಮತ್ತೊಮ್ಮೆ ವಿದ್ಯುತ್ ದರ ಏರಿಕೆ; ರಾಜ್ಯದ ಜನತೆಗೆ ಕರೆಂಟ್ ಶಾಕ್

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ, ಬಣಕಲ್ ಠಾಣಾ ಪಿಎಸ್ಐ ರೇಣುಕಾ ನೇತೃತ್ವದ ತಂಡ ಹಾಗೂ ಪೊಲೀಸರು ಗ್ರಾಮಸ್ಥರ ಸಮ್ಮುಖದಲ್ಲಿ 12 ಅಡಿ ಉದ್ದದ ಬಲಿಷ್ಠ ಗೇಟ್ ಅಳವಡಿಸಿದ್ದಾರೆ. ಸುರಕ್ಷತೆಗಾಗಿ ರಸ್ತೆ ಎರಡೂ ಬದಿಗಳಲ್ಲಿ ಗುಂಡಿ ತೋಡಲಾಗಿದ್ದು, ರಾತ್ರಿ ವೇಳೆ ನಿಗಾವಹಿಸುವ ವ್ಯವಸ್ಥೆಯನ್ನೂ ಬಲಪಡಿಸಲಾಗಿದೆ.

ಹೊಸ ನಿಯಮದಂತೆ ಪ್ರತಿದಿನ ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ಈ ಮಾರ್ಗ ಸಂಪೂರ್ಣ ಬಂದ್ ಆಗಲಿದೆ. ಗೇಟ್ನ ಕೀಲಿಯನ್ನು ಕೊಟ್ಟಿಗೆಹಾರ ಚೆಕ್ಪೋಸ್ಟ್ ಸಿಬ್ಬಂದಿ ವಶದಲ್ಲಿರಿಸಿಕೊಂಡು ನಿರ್ವಹಣೆ ಕೈಗೊಳ್ಳಲಾಗುತ್ತಿದೆ.
ಇದನ್ನೂ ಓದಿ: ಈ ಯೋಜನೆಯಡಿ ತಿಂಗಳಿಗೆ ಸಿಗಲಿದೆ 5000 ರೂ!
ಚಾರ್ಮಾಡಿ ಅಡ್ಡದಾರಿಯಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗೆ ಗೇಟ್ ಅಳವಡಿಕೆ ಕೇವಲ ತಾತ್ಕಾಲಿಕ ಪರಿಹಾರವಲ್ಲ, ಜನರ ಸುರಕ್ಷತೆ ಹಾಗೂ ಶಾಂತಿಗಾಗಿ ದೀರ್ಘಕಾಲಿಕ ಹೆಜ್ಜೆ. ಗ್ರಾಮಸ್ಥರ ಸಹಕಾರವು ಈ ಕಾರ್ಯಕ್ಕೆ ಜೀವ ತುಂಬಿದೆ. ಪೊಲೀಸರು–ಜನತೆ ಕೈಜೋಡಿಸಿದರೆ ಯಾವುದೇ ಕಾನೂನು ಉಲ್ಲಂಘನೆಗೆ ಅವಕಾಶವಿಲ್ಲ ಎಂದು ಎಸ್.ಪಿ. ವಿಕ್ರಂ ಅಮಟೆ ತಿಳಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)













