ಚಿಕ್ಕಮಗಳೂರು: ಆತ್ಮ ಯೋಜನೆಯಡಿ ಅಂತಾರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ ಹಾಗೂ ವಿಶ್ವ ಆಹಾರ ದಿನಾಚರಣೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಂತಾರಾಷ್ಟ್ರೀಯ ರೈತ ಮಹಿಳಾ ದಿನಾಚರಣೆ ಹಾಗೂ ವಿಶ್ವ ಆಹಾರ ದಿನಾಚರಣೆಯನ್ನು ಜಂಟಿ ಉಪ ನಿರ್ದೇಶಕರ ಕಛೇರಿ ಆವರಣದಲ್ಲಿ ನಡೆಸಲಾಯಿತು.

 

ಇದನ್ನೂ ಓದಿ; ಐಒಸಿಎಲ್‌ ನಲ್ಲಿ ಉದ್ಯೋಗಾವಕಾಶ; 1720‌ ಹುದ್ದೆಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಇಲ್ಲಿದೆ ಮಾಹಿತಿ

ಕೃಷಿ ಕ್ಷೇತ್ರದಲ್ಲಿ ಶೇ 75% ರಷ್ಟು ಮಹಿಳೆಯರು ಕೃಷಿ ಚಟುವಟಿಕೆಗಳನ್ನು ನಿರ್ವಹಿಸುತ್ತಿದ್ದಾರೆ. ರೈತ ಮಹಿಳೆಯರಿಗಾಗಿ ಕೃಷಿಯಲ್ಲಿ ತರಬೇತಿ, ಬೆಳೆ ಪ್ರಾತ್ಯಕ್ಷಿಕೆಗಳು, ಅಧ್ಯಯನ ಪ್ರವಾಸ, ಸ್ವಸಹಾಯ ಗುಂಪುಗಳ ರಚನೆಗಳಂತಹ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಕೃಷಿ ತಾಂತ್ರಿಕತೆಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಸಾವಯವ ಕೃಷಿಯನ್ನು ಕೈಗೊಂಡು ವಿಷ ಮುಕ್ತ ಆಹಾರ ಉತ್ಪಾದನೆಗಳಿಗೆ ಸಂಕಲ್ಪ ಮಾಡಬೇಕು. ಸರ್ಕಾರದಿಂದ ದೊರೆಯುವ ಯೋಜನೆಗಳ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು. ರೈತ ಮಹಿಳೆಯರು ತಮ್ಮ ಜೀವನ ಕಟ್ಟಿಕೊಳ್ಳಲು ಬ್ಯಾಂಕ್ ಗಳ ಮೂಲಕ ಸಿಗುವ ಸಹಾಯಧನ ಪಡೆಯಲು ಉತ್ತೇಜನ ನೀಡಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಸುಜಾತ ಹೆಚ್.ಎಲ್ ರವರು ಹೇಳಿದರು.

 

ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 21.10.223

ಇನ್ನು ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷರಾದ ನರೇಂದ್ರ.ಬಿ.ಸಿ ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಪುರುಷರಿಗೆ ಸರಿಸಮವಾಗಿ ಮುಂದುವರೆಯುತ್ತಿದ್ದಾರೆ. ಕೃಷಿ ಮತ್ತು ಸಂಸಾರ ಉತ್ತಮವಾಗಿ ನಡೆಯಬೇಕಾದರೆ ಮಹಿಳೆಯರ ಪಾತ್ರ ಮಹತ್ವವಾದದ್ದು ಎಂದರು.

 

ಬೇಸಾಯ ಶಾಸ್ತ್ರ ತೋಟಗಾರಿಕೆ ಮಹಾ ವಿದ್ಯಾಲಯ ಸಹಾಯಕ ಪ್ರಾಧ್ಯಾಪಕರಾದ ಯಮುನಾ.ಬಿ.ಸಿ ರವರು ಪೌಷ್ಟಿಕ ಆಹಾರ ಮಹತ್ವ ಕುರಿತು ಸವಿವರ ಮಾಹಿತಿಯನ್ನು ನೀಡಿದರು, ಕಾರ್ಯಕ್ರಮದಲ್ಲಿ ಜಿಲ್ಲೆಯ ಏಳು ತಾಲ್ಲೂಕುಗಳ 50 ರೈತ ಹಾಗೂ ರೈತ ಮಹಿಳೆಯರು ಭಾಗವಹಿಸಿದ್ಧರು, ಆಸಕ್ತ ರೈತ ಮಹಿಳೆಯರು ತಮ್ಮ ಕೃಷಿಯಲ್ಲಿನ ಅನುಭವವನ್ನು ವೇದಿಕೆಯಲ್ಲಿ ಹಂಚಿಕೊಂಡರು.

ಈ ಸಂದರ್ಭದಲ್ಲಿ ಕೃಷಿಯಲ್ಲಿ ಸಾಧನೆ ಮಾಡಿದ ರೈತ ಮಹಿಳೆಯರಾದ ಮಂಗಳಕುಮಾರ್, ಚಂದ್ರಕಲಾಪ್ರಕಾಶ್ ಇವರನ್ನು ಸನ್ಮಾನಿಸಲಾಯಿತು, ಸಹಾಯಕ ಕೃಷಿ ನಿರ್ದೇಶಕರಾದ ವಿಜಯಲಕ್ಷ್ಮೀ ಚಂದ್ರಶೇಖರ್, ಕೃಷಿ ಅಧಿಕಾರಿ ಸುಜಾತ ಉಪಸ್ಥಿತರಿದ್ದರು, ಆತ್ಮಯೋಜನೆ ಉಪ ಯೋಜನಾ ನಿರ್ದೇಶಕರಾದ ಜಿ.ಪಿ.ಪ್ರಿಯಾಂಕ ಕಾರ್ಯಕ್ರಮವನ್ನು ನಿರೂಪಿಸಿದರು.

 

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರ ವಿಫಲ- ಸುಧಾಕರ ಶೆಟ್ಟಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)  ಕಾಂಗ್ರೆಸ್ ಸರ್ಕಾರ ನೀಡಿದ್ದ ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಜೆಡಿಎಸ್ ಉಪಾಧ್ಯಕ್ಷ ಸುಧಾಕರ ಶೆಟ್ಟಿ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಲು ಗ್ಯಾರಂಟಿಗಳೇ ಕಾರಣ. ಅದರೆ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಭರವಸೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಿಲ್ಲ. ಜೊತೆಗೆ ಗ್ಯಾರಂಟಿ ಅನುಷ್ಠಾನದಲ್ಲೇ ಬ್ಯುಸಿಯಾಗಿರುವ ಸರ್ಕಾರ ಜನರಿಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ದೂರಿದರು.

ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಮಾಡುವಂತೆ ಒತ್ತಾಯ:
ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದಲ್ಲಿ 2.13 ಕೋಟಿ ಮಹಿಳೆಯರು ನೋಂದಣಿಯಾಗಿದ್ದಾರೆ. ಮೊದಲ ಕಂತಿನಲ್ಲಿ 1 ಕೋಟಿ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮೀ ಯೋಜನೆಯಡಿ 2 ಸಾವಿರ ರೂ. ನೀಡಲಾಗಿದೆ. ಉಳಿದವರಿಗೆ ಬ್ಯಾಂಕ್ ಖಾತೆಗೆ ಜಮೆ ಮಾಡಿಲ್ಲ. 2 ನೇ ಕಂತಿನಲ್ಲಿ 80 ಲಕ್ಷ ಮಹಿಳೆಯರಿಗೆ ಮಾತ್ರ ಹಣ ಜಮೆಯಾಗಿದೆ. ಕೂಡಲೇ ಸರ್ಕಾರ ಸಮರ್ಪಕವಾಗಿ ಹಣ ಸಂದಾಯ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಮೂರು ಸಾವಿರ ಹಾಗೂ ಡಿಪ್ಲೊಮಾ ಮುಗಿಸಿದ ವಿದ್ಯಾರ್ಥಿಗಳಿಗೆ 1500 ರೂ. ಪ್ರತಿ ತಿಂಗಳು ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಯೋಜನೆ ಜಾರಿಗೊಳಿಸಿಲ್ಲ. ಇದರಿಂದ ವಿದ್ಯಾವಂತ ನಿರುದ್ಯೋಗಿಗಳು, ಹತಾಶರಾಗಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆದರೆ ಗ್ರಾಮೀಣ ಪ್ರದೇಶದ ಮಹಿಳೆಯರು ಈ ಯೋಜನೆಯಿಂದ ವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಖಾಸಗಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರು. ಈಗ ನಾವು ಐದು ಕೆ.ಜಿ. ಅಕ್ಕಿ ನೀಡುತ್ತೇವೆ, ಕೇಂದ್ರ ಸರ್ಕಾರ ಐದು ಕೆ.ಜಿ. ಅಕ್ಕಿ ನೀಡಲಿದೆ. ನಂತರ ಅಕ್ಕಿಯ ಬದಲು ಹಣ ಪಡಿತರ ಚೀಟಿದಾರರ ಖಾತೆಗೆ ಹಾಕುವುದಾಗಿ ಹೇಳಿದರು. ಮೊದಲ ತಿಂಗಳಲ್ಲಿ ಹಣ ಜಮೆ ಮಾಡಲಾಗಿದ್ದು, ಎರಡು ತಿಂಗಳಿಂದ ಹಣ ಜಮೆಯಾಗಿಲ್ಲ ಎಂದು ದೂರಿದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.