
ಹರಿಹರಪುರ: (ನ್ಯೂಸ್ ಮಲ್ನಾಡ್ ವರದಿ) ಪದವಿ ಕಾಲೇಜಿನಲ್ಲಿ ಉದ್ಯೋಗ ನೇಮಕಾತಿ ಘಟಕವನ್ನು ಶಾಶ್ವತವಾಗಿ ಸ್ಥಾಪಿಸುವುದಾಗಿ ಶ್ರೀ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾ ಸ್ವಾಮೀಜಿಯವರು ಹೇಳಿದರು.
ಇದನ್ನೂ ಓದಿ: ಈ ಕಾರ್ಡ್ ಇದ್ರೆ ಸರ್ಕಾರದಿಂದ ಸಿಗಲಿವೆ ಈ ಸೌಲಭ್ಯಗಳು

ನಿನ್ನೆ (05.03.2025 ಬುಧವಾರದಂದು) ಹರಿಹರಪುರದ ಶ್ರೀ ಅಭಿನವ ರಾಮಾನಂದ ಸರಸ್ವತಿ ಪದವಿ ಕಾಲೇಜಿನ ಆವರಣದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ ಶ್ರೀ ಅಭಿನವ ರಾಮಾನಂದ ಸರಸ್ವತಿ ಪದವಿ ಕಾಲೇಜಿನಲ್ಲಿ ಶಾಶ್ವತವಾಗಿ ಉದ್ಯೋಗ ನೇಮಕಾತಿ ಘಟಕವನ್ನು ಸ್ಥಾಪಿಸುವುದಾಗಿ ಆಶೀರ್ವಚನ ನೀಡಿದರು.

ಇದನ್ನೂ ಓದಿ: ಲೇಬರ್ ಕಾರ್ಡ್ಗೆ ರೂ.60,000 ಸಹಾಯಧನ: ಸರ್ಕಾರದ ವಿಶೇಷ ಯೋಜನೆ
ಇನ್ನು ಈ ಉದ್ಯೋಗ ಮೇಳದಲ್ಲಿ ಟಾಟಾ, ಎಚ್.ಡಿ.ಎಫ್.ಸಿ, ಮಹಿಂದ್ರ, ಎಂ.ಆರ್.ಎಫ್ ಮುಂತಾದ 40 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಂಡಿದ್ದವು. ಈ ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯ್ಕೆಯಾಗಿ ಸ್ಥಳದಲ್ಲಿಯೇ ಅವಕಾಶ ಪತ್ರವನ್ನು ನೀಡಲಾಯಿತು.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 30,000 ಹುದ್ದೆಗಳಿಗೆ ಅರ್ಜಿ ಆಹ್ವಾನ; 18,000 ದಿಂದ 22,000 ಸಂಬಳ, 10th ವಿದ್ಯಾರ್ಹತೆ
















