ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ವಿಚಾರದಲ್ಲಿ ಸಮಸ್ಯೆಗಳಿದ್ದು, ಇದನ್ನು ಜಂಟಿ ಸರ್ವೆಯ ಮೂಲಕ ಬಗೆಹರಿಸಬೇಕಾಗಿದೆ, ಪರಿಭಾವಿತ ಅರಣ್ಯ ಎಂದು ಘೋಷಿಸಲಾಗಿರುವ ಸರ್ವೆ ನಂಬರ್ ಮತ್ತು ಲಭ್ಯ ನಕ್ಷೆಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ; ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ; ಈ ತಾಲೂಕುಗಳ ರೈತರ ಖಾತೆಗೆ ಹಣ ಜಮಾ

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಜಿಲ್ಲೆಯ ಶಾಸಕರುಗಳೊಂದಿಗೆ ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದ ಅವರು, ಪರಿಭಾವಿತ (ಡೀಮ್ಡ್) ಅರಣ್ಯದ ವಿಚಾರದಲ್ಲಿ ಈಗಾಗಲೇ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಲಾಗಿದೆ. 3.3 ಲಕ್ಷಕ್ಕೂ ಹೆಚ್ಚು ಪ್ರದೇಶವನ್ನು ಪರಿಭಾವಿತ ಅರಣ್ಯ ಎಂದು ಅಂತಿಮಗೊಳಿಸಲಾಗಿದೆ. ಇದರಲ್ಲೂ ಕೆಲವು ಪಟ್ಟಾ ಭೂಮಿ ಇದೆ, ಶಾಲೆ ಇದೆ ಎಂದು ಹೇಳಲಾಗುತ್ತಿದ್ದು, ಈಗ ಪ್ರತಿ ಜಿಲ್ಲೆಯಲ್ಲಿನ ಸಮಸ್ಯೆಗಳ ಬಗ್ಗೆ ಪ್ರತ್ಯೇಕ ಪ್ರಮಾಣಪತ್ರ ಸಲ್ಲಿಸಲು ಸಾಧ್ಯವಿಲ್ಲ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಸರ್ವೆ ಮಾಡಿಸಿದಲ್ಲಿ ಎಲ್ಲ ಮಾಹಿತಿಯನ್ನೂ ಕ್ರೋಡೀಕರಿಸಿ ಮತ್ತೊಮ್ಮೆ ಸುಪ್ರೀಂಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಬಹುದು. ಆಗ ಮಾತ್ರ ಈ ಸಮಸ್ಯೆ ಪರಿಹರಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ; ಪೌರ ಕಾರ್ಮಿಕರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್; 1433 ಹುದ್ದೆ ಮಂಜೂರು
ಡೀಮ್ಡ್ 1 ಎಂದು ಘೋಷಿಸಲಾಗಿದ್ದನ್ನು ಈಗಾಗಲೇ ಕೈಬಿಡಲಾಗಿದೆ. ಡೀಮ್ಡ್ 2 ಎಂದು ಘೋಷಿಸಿರುವುದು ಅಂತಿಮವಾಗಿದ್ದು, ಇದರಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸಲು ಪ್ರಯತ್ನಿಸಲಾಗುವುದು, ಜಂಟಿ ಸಮೀಕ್ಷೆ ಪೂರ್ಣವಾಗುವವರೆಗೆ 4(1) ಪ್ರಕ್ರಿಯೆ ನಡೆಸದಂತೆ ಸೂಚಿಸುವುದಾಗಿ ಚಿಕ್ಕಮಗಳೂರು ಭಾಗದ ಶಾಸಕರುಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.
ಕಾಡಾನೆ ಸಮಸ್ಯೆಗೂ ಪರಿಹಾರ:
ಮಳೆ ಕೊರತೆಯಿಂದ ಕಾಡಾನೆಗಳ ಹಾವಳಿಯೂ ಹೆಚ್ಚಳವಾಗುತ್ತಿದ್ದು, ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಇದಕ್ಕೆ ಸೂಕ್ತ ಪರಿಹಾರ ಮಾರ್ಗವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಇಲಾಖೆಗೆ ಸೂಚಿಸಲಾಗಿದೆ ಎಂದರು. ಚಿಕ್ಕಮಗಳೂರು ಭಾಗದಲ್ಲಿ ಬೀಡು ಬಿಟ್ಟಿರುವ ಆನೆಗಳನ್ನು ಕಾಡಿಗೆ ಮರಳಿಸಲು ಮತ್ತು ಪುಂಡಾನೆಯನ್ನು ಹಿಡಿದು ಆನೆ ಶಿಬಿರಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಇನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಮಾತನಾಡಿ, ಒಂದು ವಾರದೊಳಗೆ ಪರಿಭಾವಿತ ಅರಣ್ಯ, ಮೀಸಲು ಅರಣ್ಯದ ಮಾಹಿತಿಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡಲಾಗುವುದು. ಈಗ ಅತ್ಯಾಧುನಿಕ ಡ್ರೋನ್ ನಂತಹ ಸಲಕರಣೆ ಇದ್ದು, ಜಂಟಿ ಸರ್ವೆಯನ್ನು ಮಾಡಲು ಸಹಕರಿಸಲಾಗುವುದು ಎಂದು ತಿಳಿಸಿದರು.
ಡಿ.ಬಿ.ಚಂದ್ರೇಗೌಡರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ನಿಧನ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾರದ ಹಳ್ಳಿ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಮೂಡಿಗೆರೆ ತಾಲೂಕು ದಾರದಹಳ್ಳಿ ಗ್ರಾಮದ ಡಿ.ಬಿ. ಚಂದ್ರೇಗೌಡರ ನಿವಾಸದ ಮುಂಭಾಗ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬುಧವಾರ ಮಧ್ಯಾಹ್ನ 1 ಗಂಟೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾರ್ಥಿವ ಶರೀರಕ್ಕೆ ಹೂಗುಚ್ಚವಿಟ್ಟು ನಮಿಸಿದರು. ಇದೇ ವೇಳೆ ಪೋಲಿಸ್ ಸಿಬ್ಬಂದಿಗಳು ಸಕಲ ಸರ್ಕಾರಿ ಗೌರವವನ್ನು ಸಲ್ಲಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿ ಚಂದ್ರೇಗೌಡ ಒಳ್ಳೆ ಸ್ಪೀಕರ್ ಎಂದು ಪ್ರಶಂಸೆ ಪಡೆದುಕೊಂಡಿದ್ದರು. ಯಾಕಂದ್ರೆ, ಆವತ್ತು ಸ್ಪೀಕರ್ ಆಗಿ ಕೆಲಸ ಮಾಡುವುದು ಬಹಳ ಕಷ್ಟ ಇತ್ತು. ಬಿಜೆಪಿ ಬೆಂಬಲ ಪಡೆದು ರಾಮಕೃಷ್ಣ ಹೆಗ್ಡೆ ಸಿಎಂ ಆಗಿದ್ರು, ಚಂದ್ರೇಗೌಡ ಸ್ಪೀಕರ್ ಆಗಿ ಚಾಕಚಕ್ಯತೆಯಿಂದ ಕೆಲಸ ಮಾಡಿದ್ರು. ಆಮೇಲೆ ಜನತಾ ಪಾರ್ಟಿಯಲ್ಲಿ ಬಹಳ ದಿನ ನಮ್ಮ ಜೊತೆಯಲ್ಲಿ ಇದ್ದರು ಮತ್ತೆ ಕಾಂಗ್ರೆಸ್ ಸೇರಿ ಎಂ.ಎಲ್.ಎ. ಹಾಗೂ ಮಂತ್ರಿ ಆಗಿದ್ರು. ಅವರು ರಾಜಕೀಯ ಆಗಿ ನಾಲ್ಕು ಸದನದಲ್ಲೂ ಸದಸ್ಯರಾಗಿದ್ದರು ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನ ಪರಿಷತ್ 4 ಸದನದಲ್ಲೂ ಸದಸ್ಯರಾಗಿದ್ದರು ಆ ರೀತಿ ನಾಲ್ಕು ಸದನದಲ್ಲೂ ಸದಸ್ಯರಾಗೋದು ತೀರಾ ಅಪರೂಪ ಪ್ರಜಾಪ್ರಭುತ್ವದ ನಾಲ್ಕು ವೇದಿಕೆಯಲ್ಲೂ ಇದ್ದರು. 87 ವರ್ಷದ ಅವರು ನಮ್ಮನ್ನ ಅಗಲಿದ್ದಾರೆ. ಅವರ ಸಾವಿನಿಂದ ರಾಜ್ಯಕ್ಕೆ ನಷ್ಟವಾಗಿದೆ. ಅವರ ಕುಟುಂಬಕ್ಕೆ ದೇವರು ನಷ್ಟ ಭರಿಸುವ ಶಕ್ತಿ ನೀಡಲಿ ಎಂದರು.
ಇದನ್ನೂ ಓದಿ; ಪಡಿತರ ಚೀಟಿದಾರರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ರೇಷನ್ ಕಾರ್ಡ್ ಕ್ಯಾನ್ಸಲ್; ನಿಮ್ಮ ರೇಷನ್ ಕಾರ್ಡ್ ರದ್ದಾಗಲು ಕಾರಣ ಇಲ್ಲಿದೆ
ಡಿ.ಬಿ.ಚಂದ್ರೇಗೌಡರ ಅಂತಿಮ ದರ್ಶನ ಪಡೆದ ಕೇಂದ್ರ ಸಚಿವೆ ಹಾಗೂ ಡಿ.ಎನ್.ಜೀವಾರಾಜ್:
ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ವಿಧಿವಶ ಹಿನ್ನೆಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಸಚಿವ ಡಿ.ಎನ್.ಜೀವಾರಾಜ್ ಅಂತಿಮ ದರ್ಶನವನ್ನು ಪಡೆದುಕೊಂಡರು. ನಂತರ ಶೋಭಾ ಕರಂದ್ಲಾಜೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದರೊಂದಿಗೆ ತರೀಕೆರೆ ಶಾಸಕ ಜಿ.ಎಸ್ ಶ್ರೀನಿವಾಸ್, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವೆ ಮೋಟಮ್ಮ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಕಡೂರು ಶಾಸಕ ಆನಂದ, ಮಾಜಿ ಶಾಸಕ ಬಿಬಿ ನಿಂಗಯ್ಯ ಅವರು ಡಿ.ಬಿ. ಚಂದ್ರೇಗೌಡರ ಅಂತಿಮ ದರ್ಶನವನ್ನು ಪಡೆದುಕೊಂಡರು.













