ಕಳಸ: ದಾರಿ ತಪ್ಪಿ ಬಂದ ವೃದ್ಧೆಯ ರಕ್ಷಣೆ

ಕಳಸ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆಯಿಂದ ದಿಡುಪೆ ಕಡೆ ದಟ್ಟ ಅರಣ್ಯದ ರಸ್ತೆಯಲ್ಲಿ ಮಧ್ಯರಾತ್ರಿ ಹೊತ್ತಿಗೆ ಬರುತ್ತಿದ್ದ ವೃದ್ಧೆಯೊಬ್ಬರನ್ನು ಅರಣ್ಯ ಇಲಾಖೆ ರಕ್ಷಿಸಿ ಮನೆಯವರಿಗೆ ಒಪ್ಪಿಸಿದ್ದಾರೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ʼನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ; ಹೊಸ ಸದಸ್ಯರ ಸೇರ್ಪಡೆಯನ್ನು ಜಸ್ಟ್ ಹೀಗೆ ಮಾಡಿ; ಈ ದಾಖಲೆ ಕಡ್ಡಾಯ


ಸುಮಾರು 70 ವರ್ಷ ಪ್ರಾಯದ ಮಹಿಳೆಯೊಬ್ಬರು ಮಾನಸಿಕ ಅಸೌಖ್ಯದಿಂದ ಬಳಲುತ್ತಿದ್ದು, ಮನೆಯವರ ಗಮನಕ್ಕೆ ಬರದೆ ಸೋಮವಾರ ಸಂಜೆ ಮನೆಯಿಂದ ಕಾಣೆಯಾಗಿದ್ದರು. ಸಂಸೆಯಿಂದ ದಿಡುಪೆಗೆ ಸಂಪರ್ಕ ಇರುವ ಕಾಡು ರಸ್ತೆಯಲ್ಲಿ ರಾತ್ರಿ 11:30 ಸುಮಾರಿಗೆ ಬೈಕ್ ನಲ್ಲಿ ತೆರಳುತ್ತಿದ್ದವರಿಗೆ ಕಂಡುಬಂದಿದ್ದಾರೆ. ತಕ್ಷಣ ಬೈಕ್ ಸವಾರರು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದವರ ಗಮನಕ್ಕೆ ತಂದಿದ್ದಾರೆ.


ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


ಸ್ಥಳಕ್ಕೆ ತೆರಳಿದ ವನ್ಯಜೀವಿ ವಿಭಾಗದ ಡಿ.ಆರ್.ಎಫ್.ಒ ರಂಜಿತ್ ಕುಮಾರ್ ಮತ್ತು ಸಿಬ್ಬಂದಿ ಭರತ್ ಹಾಗೂ ಸ್ಥಳೀಯರ ಸಹಕಾರದಲ್ಲಿ ವೃದ್ಧೆಯನ್ನು ಕರೆತಂದ ಬಳಿಕ ಹೆಚ್ಚಿನ ಮಾಹಿತಿ ಸಂಗ್ರಹಿಸಿ ಮನೆಯವರ ವಶಕ್ಕೆ ಒಪ್ಪಿಸಿದ್ದಾರೆ.


ಇದನ್ನೂ ಓದಿ; ಮಹಿಳೆಯರಿಗೆ ಬಂಪರ್‌ ಸುದ್ದಿ; ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಸೋಲಾರ್ ಸ್ಟವ್!; ಈ ದಾಖಲೆ ಕಡ್ಡಾಯ


ಇನ್ನು ಈ ಭಾಗದಲ್ಲಿ ಆನೆ, ಚಿರತೆ ಮೊದಲಾದ ವನ್ಯಮೃಗಗಳು ತಿರುಗಾಟ ನಡೆಸುವ ದಿಡುಪೆ -ಸಂಸೆ ರಸ್ತೆ ರಾತ್ರಿ ವೇಳೆ ಹೆಚ್ಚು ಅಪಾಯಕಾರಿ. ಅರಣ್ಯ ಇಲಾಖೆ ಹಾಗೂ ಸ್ಥಳೀಯರ ತುರ್ತು ಸ್ಪಂದನೆಯಿಂದ ವೃದ್ಧೆ ಯಾವುದೇ ಅಪಾಯಕ್ಕೆ ಸಿಲುಕದೆ ಮನೆ ಮಂದಿಯನ್ನು ಸೇರಿದ್ದಾರೆ.


ಇದನ್ನೂ ಓದಿ; Mrs ಇಂಡಿಯಾ ರೋಲ್‌ ಮಾಡೆಲ್‌ ಪ್ರಶಸ್ತಿ ಮುಡಿಗೇರಿಸಿಕೊಂಡ “ದಿವ್ಯಾ ಶೆಟ್ಟಿ”; ದಿವ್ಯಾ ಶೆಟ್ಟಿ ಅವರ ಸ್ಪೂರ್ತಿದಾಯಕ ಪ್ರಯಾಣ ಇಲ್ಲಿದೆ ನೋಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.