ಕಳಸ: (ನ್ಯೂಸ್ ಮಲ್ನಾಡ್ ವರದಿ) ಹೃದಯಾಘಾತದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸೈ ಜಿ.ಕೆ.ಮುರುಳಿಧರ್ ಇಂದು ನಿಧನ ಹೊಂದಿದ್ದಾರೆ. ಮುರುಳಿಧರ್ ಅವರಿಗೆ ಇಂದು ಬೆಳಗ್ಗಿನ ಜಾವ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಕಳಸದ ಕಾವೇರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ಬಂದ ಕೆಲವೇ ಕ್ಷಣಗಳಲ್ಲಿ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ; ವಿದ್ಯಾರ್ಥಿಗಳೇ ಗಮನಿಸಿ; ಎಲ್ಐಸಿ ವಿದ್ಯಾಧನ್ ಸ್ಕಾಲರ್ಶಿಪ್ ಅರ್ಜಿ ಆಹ್ವಾನ

ಮುರುಳಿಧರ್ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನವರಾಗಿದ್ದು, ನಾಲ್ಕು ವರ್ಷಗಳಿಂದ ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹಾಗೆಯೇ ಚಿಕ್ಕಮಗಳೂರು ಬಸವನಹಳ್ಳಿ ಠಾಣೆ, ಶೃಂಗೇರಿ, ಕುದುರೆಮುಖ ಠಾಣೆಗಳಲ್ಲೂ ಕೂಡ ಕಾರ್ಯನಿರ್ವಹಿಸಿದ್ದರು. ಇವರ ನಿವೃತ್ತಿಗೆ ಇನ್ನು ಕೇವಲ 11 ತಿಂಗಳು ಬಾಕಿಯಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಇಂದಿನ ಅಡಿಕೆ ಮಾರುಕಟ್ಟೆ ಹೇಗಿದೆ | ಬೆಟ್ಟೆ, ಗೊರಬಲು, ಸರಕು, ಇಡಿ | 23-09-2023
ಇವರಿಗೆ ಪತ್ನಿ ಹಾಗೂ ಓರ್ವ ಪುತ್ರಿ ಇದ್ದು, ಅಕಾಲಿಕ ನಿಧನನಿಂದ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ. ಮುರಳಿಧರ್ ಅವರ ಪಾರ್ಥೀವ ಶರೀರವನ್ನು ಇಲಾಖೆಯ ಸಕಲ ಗೌರವದೊಂದಿಗೆ ಇಂದು ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ.
ಅನಗತ್ಯ ಸುಳ್ಳು ಸುದ್ದಿಗಳನ್ನು ಹರಡುವುದು ಬೇಡ | ಯಾವುದೇ ಮಾಹಿತಿಯನ್ನು ಕೇಳಿದರೆ ನಾನು ನೀಡುತ್ತೇನೆ-ಎಸ್ಪಿ
ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಹಲವೆಡೆ ಗಣೇಶ ವಿಸರ್ಜನೆ ನಡೆಯುತ್ತಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ರಕ್ಷಣೆ ಇಲಾಖೆ ಸೂಕ್ತ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಶಾಂತಿ ಕಾಪಾಡುವ, ಶ್ರದ್ಧಾಭಕ್ತಿಯ ಆಚರಣೆ ಮಾಡಲು ಮುಂದಾಗಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.













