ಮೂಡಿಗೆರೆ: ಕನ್ನಡ ಭಾಷೆ ಹೃದಯ ಶ್ರೀಮಂತಿಕೆಯ ಭಾಷೆ: ಬಿ. ಕೆ. ದಿನೇಶ್

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕನ್ನಡ ಭಾಷೆಯು ಹೃದಯ ಶ್ರೀಮಂತಿಕೆಯ ಭಾಷೆಯಾಗಿದೆ ಎಂದು ಬೆಟ್ಟಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ. ಕೆ. ದಿನೇಶ್ ಹೇಳಿದರು.


ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್‌ ಡಿಟೈಲ್ಸ್


ಬಣಕಲ್ ನಜರೆತ್ ಶಾಲೆಯಲ್ಲಿ ಬಣಕಲ್ ಕಸಾಪ ಘಟಕ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಮನಸ್ಸಿನಲ್ಲಿ ಇತರ ಭಾಷೆಯನ್ನು ಗೌರವಿಸುವ ಹಾಗೂ ಕನ್ನಡ ಭಾಷೆಯನ್ನು ಉಳಿಸಿಕೊಳ್ಳುವ ರೂಢಿ ಬೆಳೆಸಿಕೊಂಡಾಗ ಮಾತ್ರ ಕನ್ನಡ ಭಾಷೆ ಬೆಳೆಯುತ್ತದೆ ಎಂದರು.


ಇದನ್ನೂ ಓದಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್‌ ಆಫರ್; 10th ಪಾಸ್‌ ಆದವರು ಅರ್ಜಿ ಸಲ್ಲಿಸಿ


ಕಸಾಪ ಮೂಡಿಗೆರೆ ತಾಲ್ಲೂಕು ಘಟಕದ ಅಧ್ಯಕ್ಷ ಡಿ. ಕೆ. ಲಕ್ಷ್ಮಣಗೌಡ ಮಾತನಾಡಿ, ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ಕಾರ್ಯಕ್ರಮ ನಡೆಯುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಕನ್ನಡಕ್ಕೆ 2500 ವರ್ಷದ ಇತಿಹಾಸವಿದ್ದು, ಕನ್ನಡ ಪರಂಪರೆ ಮುಂದಿನ ಪೀಳಿಗೆಗೂ ಉಳಿಯಬೇಕು ಎಂದರು.


ಇದನ್ನೂ ಓದಿ; ಗೃಹ ಸಾಲ ಪಡೆಯುವವರಿಗೆ ಭರ್ಜರಿ ಸುದ್ದಿ;  RBI ನಿಂದ ಹೊಸ ನಿಯಮಗಳು ಜಾರಿ


ಕಸಾಪ ಜಿಲ್ಲಾ ಪ್ರಧಾನ ಸಂಚಾಲಕ ಮಗ್ಗಲಮಕ್ಕಿ ಗಣೇಶ್ ಮಾತನಾಡಿ, ಕನ್ನಡ ಭಾಷೆ ಬೆಳೆಸಲು ಉತ್ತಮ ಚಟುವಟಿಕೆಗಳನ್ನು ನಡೆಸುವ ಅವಶ್ಯಕತೆಯಿದೆ. ಕನ್ನಡ ಸಾಹಿತ್ಯವನ್ನು ಪ್ರತಿಯೊಬ್ಬರೂ ಓದಿ ಅರಿತುಕೊಳ್ಳಬೇಕು ಎಂದರು.

ಬಣಕಲ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಿ. ಎಚ್. ಶ್ರೀನಿವಾಸ್ ಮಾತನಾಡಿ, ಕನ್ನಡ ಭಾಷೆ ಅಭಿವೃದ್ದಿಯಾಗಬೇಕಾದರೆ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಲ್ಲಿ ಕನ್ನಡದಲ್ಲಿಯೇ ಶಿಕ್ಷಣ ದೊರೆಯಬೇಕು ಎಂದರು.


ಇದನ್ನೂ ಓದಿ; ಗೃಹಜ್ಯೋತಿ ಯೋಜನೆ ನೋಂದಣಿಗೆ ಇನ್ನೂ ಇದೆ ಅವಕಾಶ;  ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಘಟಕದ ಅಧ್ಯಕ್ಷ ಬಿ. ಕೆ. ಲೋಕೇಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ರೀಡೆಯನ್ನು ಚಿನ್ನದ ಪದಕ ಪಡೆದ ಕುಮಾರಿ ಶರಣ್ಯ, ಅಂಕಿತ, ಎಸ್. ಜಿ. ಧೃತಿ ಅವರನ್ನು ಕಸಾಪ ವತಿಯಿಂದ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಕನ್ನಡ ಪರ ಹೋರಾಟಗಾರ ಹೊರಟ್ಟಿ ರಘು, ನಜರೆತ್ ಶಾಲೆಯ ಆಡಳಿತ ಮಂಡಳಿಯ ಲವಕುಮಾರ್, ಮುಖಂಡರಾದ ಬಿ. ಎಸ್. ವಿಕ್ರಂ, ಮಂಜುನಾಥ ರಾಥೋಡ್, ಮುಖ್ಯ ಶಿಕ್ಷಕ ಶಿವರಾಮೇಗೌಡ, ಸುರೇಶ್, ಬಿ. ಎ. ಯತೀಶ್, ಶರತ್ ಫಲ್ಗುಣಿ, ಡಿ. ಕೆ. ಮಂಜುನಾಥ್, ಹೆಬ್ರಿಗೆ ಪೂರ್ಣೇಶ್, ಅರವಿಂದ ಕೋಳೂರು, ರಾಮಚಂದ್ರ, ಸುಪ್ರೀತ್ ಬೆಟ್ಟಗೆರೆ, ಶಿಕ್ಷಕ ಭಕ್ತೇಶ್ ಇದ್ದರು. (ವರದಿ- ತನು ಕೊಟ್ಟಿಗೆಹಾರ)


ಇದನ್ನೂ ಓದಿ; ರೈತರ ಗಮನಕ್ಕೆ; ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.