ಕೊಪ್ಪದಲ್ಲಿ ನಾಳೆ ಜೆಡಿಎಸ್ ಕಾರ್ಯಕರ್ತರ ಸಭೆ, ಕೋಟ ಶ್ರೀನಿವಾಸ್ ಪೂಜಾರಿ ಭಾಗಿ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) 2024 ರ ಲೋಕಸಭಾ ಚುನಾವಣೆಯ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಲ್ಕು ತಾಲೂಕುಗಳ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಹಿರಿಯ ಉಪಾದ್ಯಕ್ಷ ಸುಧಾಕರ್ ಶೆಟ್ಟಿ ತಿಳಿಸಿದ್ದಾರೆ.

 

ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಬಿಜೆಪಿ ಠಕ್ಕರ್!; ಮೋದಿ ಕಿ ಗ್ಯಾರಂಟಿ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ರಿಲೀಸ್

ರಾಜ್ಯಾದ್ಯಂತ ಲೋಕಸಭಾ ಚುನಾವಣಾ ಪ್ರಚಾರದ ಕಣ ಕಂಗೇರಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು, ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಪಕ್ಷೇತರ ಅಭ್ಯರ್ಥಿಗಳೂ ಕೂಡ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದರ ಜೊತೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಕೂಡ ಭರ್ಜರಿ ಮತ ಬೇಟೆ ಕೂಡ ನಡೆಸುತ್ತಿದ್ದಾರೆ. ಈ ನಡುವೆ ನಾಲ್ಕು ತಾಲೂಕುಗಳ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಮಂಗಳವಾರ (ನಾಳೆ) ಮಧ್ಯಾಹ್ನ 12:00 ಗಂಟೆಗೆ ಕೊಪ್ಪ ತಾಲೂಕು ಕಚೇರಿ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಹಿರಿಯ ಉಪಾದ್ಯಕ್ಷ ಸುಧಾಕರ್ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ: ಉಚಿತ ಪಡಿತರ ಸೇರಿ ಹಲವು ಭರವಸೆ ನೀಡಿದ ಬಿಜೆಪಿ

ಎನ್.ಆರ್ ಪುರ: ತೋಟಕ್ಕೆ ಹೋಗಿದ್ದ ರೈತನಿಗೆ ಸಿಡಿಲು ಬಡಿದು ಸಾವು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿನ್ನೆ ಮಳೆ ಸುರಿದಿದ್ದು, ಬಿರುಬೇಸಿಗೆಯಿಂದ ಕಾದ ಕಾವಲಿಯಂತಾಗಿದ್ದ ಭೂಮಿಗೆ ತಂಪೆರೆದಿದೆ. ಇದರ ನಡುವೆ ಮಲೆನಾಡಿನಲ್ಲಿ ಸಿಡಿಲಿಗೆ ರೈತ ಬಲಿಯಾಗಿದ್ದಾರೆ.

ಇದನ್ನೂ ಓದಿ; HSRP ನಂಬರ್ ಪ್ಲೇಟ್ ಅಳವಡಿಕೆ; ವಾಹನ ಸವಾರರಿಗೆ ಮಹತ್ವದ ಮಾಹಿತಿ ಇಲ್ಲಿದೆ!

ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಅರಳಿಕೊಪ್ಪದಲ್ಲಿ ತೋಟಕ್ಕೆ ತೆರಳಿದ್ದ ರೈತನಿಗೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಶಂಕರ್ (48) ಸಿಡಿಲು ಬಡಿದು ಮೃತಪಟ್ಟ ದುರ್ದೈವಿ.

ಇದನ್ನೂ ಓದಿ; SBI ಅಮೃತ್‌ ಕಲಶ್‌ ಎಫ್‌ಡಿ ಸ್ಕೀಮ್‌; ಹೂಡಿಕೆ ಗಡುವು ವಿಸ್ತರಿಸಿದ ಎಸ್‌ಬಿಐ; ಈ ಯೋಜನೆಯಲ್ಲಿ ಏನೆಲ್ಲಾ ಲಾಭ? ಇಲ್ಲಿದೆ ಡಿಟೈಲ್ಸ್

ಮೂಡಿಗೆರೆ, ಕೊಪ್ಪ, ಜಯಪುರ, ಬಾಳೆಹೊನ್ನೂರಲ್ಲಿ ಧಾರಾಕಾರ ಮಳೆಯಾಗಿದ್ದು, ಚಿಕ್ಕಮಗಳೂರು ನಗರ, ಮಲ್ಲೇನಹಳ್ಳಿ, ಖಾಂಡ್ಯ, ಮುತ್ತೋಡಿ ಭಾಗದಲ್ಲಿ 3 ದಿನಗಳಿಂದ ಸಂಜೆ ವೇಳೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಬಿಸಿಲ ಝಳಕ್ಕೆ ಕಂಗಲಾಗಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ; ಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.