ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಪುಟ್ಟ ಬಾಲಕಿಯೊಬ್ಬಳು ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ಉದ್ದದ ಕೇಶವನ್ನು ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾಳೆ.
ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಬಿಜೆಪಿ ಠಕ್ಕರ್!; ಮೋದಿ ಕಿ ಗ್ಯಾರಂಟಿ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ರಿಲೀಸ್

4 ನೇ ತರಗತಿಯಲ್ಲಿ ಓದುತ್ತಿರುವ ಈ ಪುಟ್ಟ ಬಾಲಕಿ ಹೆಸರು ಚಿತ್ರಿಕಾ. ಪ್ರವೀಣ್ ಎಸ್ ಸಂಕ್ಲಾಪುರ ಅವರ ಮಗಳಾಗಿರುವ ಚಿತ್ರಿಕಾ, ವಿದ್ಯಾನಗರ ಶಾಲೆಯಲ್ಲಿ 4 ನೇ ತರಗತಿಯ ಓದುತ್ತಿರುವ ಈ ಬಾಲಕಿ, ಕ್ಯಾನ್ಸರ್ ರೋಗಿಗಳಿಗಾಗಿ ತಾನು ಬೆಳೆಸಿದ ಉದ್ದದ ಕೂದಲನ್ನು ದಾನ ಮಾಡಿದ್ದಾಳೆ.

ಇದನ್ನೂ ಓದಿ: ಉಚಿತ ಪಡಿತರ ಸೇರಿ ಹಲವು ಭರವಸೆ ನೀಡಿದ ಬಿಜೆಪಿ
ಕ್ಯಾನ್ಸರ್ ನಿಂದ ಕೂದಲು ಕಳೆದುಕೊಂಡು ತಲೆಗೂದಲಿಲ್ಲದೆ ಮಗುವೊಬ್ಬಳು ಯಾವ ರೀತಿಯ ಸಂಕಟ ಪಡುತ್ತಾಳೆ ಎನ್ನುವುದನ್ನು ಮನಗಂಡಿದ್ದ ಚಿತ್ರಿಕಾ, ಕ್ಯಾನ್ಸರ್ ನಿಂದಾಗಿ ತಲೆಗೂದಲು ಕಳೆದುಕೊಂಡವರಿಗೆ ದಾನವಾಗಿ ನೀಡಲು ತೀರ್ಮಾನಿಸಿ ಪುತ್ತೂರಿನ ಹೊಸ ಬೆಳಕು ಬಡವರ ಆಶಾಕಿರಣ ಸೇವಾ ಟ್ರಸ್ಟ್ ಹಾಗೂ ರಕ್ತ ಸಂಜೀವಿನಿ ಬ್ಲಡ್ ಗ್ರೂಪ್ ಮೂಲಕ ಕೂದಲನ್ನು ದಾನವಾಗಿ ನೀಡಿದ್ದಾಳೆ.
ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣಕ್ಕೆ ಬೇಕು ಪರ್ಮಿಷನ್; ಸರ್ಕಾರದ ಹೊಸ ರೂಲ್ಸ್
ಈ ಪುಟ್ಟ ಬಾಲಕಿಯ ಮಾನವೀಯತೆ ಎಲ್ಲರಿಗೂ ಮಾದರಿಯಾಗಿದೆ.
ಎನ್.ಆರ್ ಪುರ: ತೋಟಕ್ಕೆ ಹೋಗಿದ್ದ ರೈತನಿಗೆ ಸಿಡಿಲು ಬಡಿದು ಸಾವು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿನ್ನೆ ಮಳೆ ಸುರಿದಿದ್ದು, ಬಿರುಬೇಸಿಗೆಯಿಂದ ಕಾದ ಕಾವಲಿಯಂತಾಗಿದ್ದ ಭೂಮಿಗೆ ತಂಪೆರೆದಿದೆ. ಇದರ ನಡುವೆ ಮಲೆನಾಡಿನಲ್ಲಿ ಸಿಡಿಲಿಗೆ ರೈತ ಬಲಿಯಾಗಿದ್ದಾರೆ.
ಇದನ್ನೂ ಓದಿ; HSRP ನಂಬರ್ ಪ್ಲೇಟ್ ಅಳವಡಿಕೆ; ವಾಹನ ಸವಾರರಿಗೆ ಮಹತ್ವದ ಮಾಹಿತಿ ಇಲ್ಲಿದೆ!
ಇದನ್ನೂ ಓದಿ; SBI ಅಮೃತ್ ಕಲಶ್ ಎಫ್ಡಿ ಸ್ಕೀಮ್; ಹೂಡಿಕೆ ಗಡುವು ವಿಸ್ತರಿಸಿದ ಎಸ್ಬಿಐ; ಈ ಯೋಜನೆಯಲ್ಲಿ ಏನೆಲ್ಲಾ ಲಾಭ? ಇಲ್ಲಿದೆ ಡಿಟೈಲ್ಸ್
ಮೂಡಿಗೆರೆ, ಕೊಪ್ಪ, ಜಯಪುರ, ಬಾಳೆಹೊನ್ನೂರಲ್ಲಿ ಧಾರಾಕಾರ ಮಳೆಯಾಗಿದ್ದು, ಚಿಕ್ಕಮಗಳೂರು ನಗರ, ಮಲ್ಲೇನಹಳ್ಳಿ, ಖಾಂಡ್ಯ, ಮುತ್ತೋಡಿ ಭಾಗದಲ್ಲಿ 3 ದಿನಗಳಿಂದ ಸಂಜೆ ವೇಳೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಬಿಸಿಲ ಝಳಕ್ಕೆ ಕಂಗಲಾಗಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ; ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ













