
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಸಂಘ ವತಿಯಿಂದ ಚಿಕ್ಕಮಗಳೂರು ನಗರದ ಹನುಮಂತಪ್ಪ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!

ರಾಜ್ಯಪಾಲರು ಸುಗ್ರೀವಾಜ್ಞೆಗೆ ಅಂಕಿತ ಹಾಕದನ್ನ ವಿರೋಧಿಸಿ ಮೈಕ್ರೋ ಫೈನಾನ್ಸ್ ವಿರುದ್ಧ ಹಾಗೂ ಧರ್ಮಸ್ಥಳ ಸಂಘದ ವಿರುದ್ಧ ನೂರಾರು ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪೋಷಕರ ಗಮನಕ್ಕೆ; ವಿವಿಧ ವಸತಿ ಶಾಲೆಗಳಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ!; ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಇದರಿಂದ ಈಗಾಗಲೇ ಹಲವರು ಆತ್ಮಹತ್ಯೆಯ ಮಾರ್ಗ ಹಿಡಿಯುವಂತಾಗಿದೆ. ಕೆಲವು ಕಡೆ ಗ್ರಾಮಕ್ಕೆ ಗ್ರಾಮವೇ ಖಾಲಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಕಂಡುಬಂದಿರುವ ಮೈಕ್ರೋ ಫೈನಾನ್ಸ್ ಹಾವಳಿ ನಿಜಕ್ಕೂ ದುರದೃಷ್ಟಕರವಾಗಿದೆ. ಕಿರುಬಂಡವಾಳ ಸೇವೆಗಳ ಕುರಿತು ಸರ್ಕಾರ ಸ್ಪಷ್ಟ ನೀತಿ-ನಿರೂಪಣೆಯನ್ನು ಜಾರಿ ಮಾಡುವ ತುರ್ತು ಅಗತ್ಯವಾಗಿದೆ ಎಂದು ಹೇಳಬಹುದು.
ಇದನ್ನೂ ಓದಿ: PM ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಬಿಡುಗಡೆ!; ಹಣ ಬಾರದೇ ಇದ್ರೆ ಈ ರೀತಿ ಮಾಡಿ
















