ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಬಣಕಲ್ ನಜರತ್ ಶಾಲೆಯ ವಿದ್ಯಾರ್ಥಿ ಸಮೃದ್ಧ್ ಅವರು ICSE SSLC ಪರೀಕ್ಷೆಯಲ್ಲಿ 92% ಅಂಕ ಗಳಿಸುವ ಮೂಲಕ ಶಾಲೆ ಹಾಗೂ ಪೊಲೀಸ್ ಇಲಾಖೆಗೆ ಹೆಮ್ಮೆ ತಂದಿದ್ದಾರೆ. ಸಮೃದ್ಧ್ ಅವರು ಬಾಳೂರು ಹೆಡ್ ಕಾನ್ಸ್ಟೆಬಲ್ ನಂದೀಶ್ ಅವರ ಪುತ್ರರಾಗಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಶೋಗೆ ಫೈನಲ್ ಆದ 18 ಸ್ಪರ್ಧಿಗಳು ಇವರೇ?

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರು, ಪೊಲೀಸ್ ಇಲಾಖೆಯ ಮಕ್ಕಳಲ್ಲಿ ಇಂತಹ ಶೈಕ್ಷಣಿಕ ಸಾಧನೆ ಕಂಡು ಹೆಮ್ಮೆಯಾಗುತ್ತದೆ. ಸಮೃದ್ಧ್ ಅವರ ಪರಿಶ್ರಮ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಲಿ ಎಂದು ಹೇಳಿದರು.

ಬಾಳೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ದಿಲೀಪ್ ಅವರು, ಸಮೃದ್ಧ್ ಅವರ ಸಾಧನೆ ಪೊಲೀಸ್ ಕುಟುಂಬಕ್ಕೆ ಪ್ರೇರಣೆ. ಭವಿಷ್ಯದಲ್ಲೂ ಇದೇ ರೀತಿಯಾಗಿ ಮೆರುಗನ್ನು ತೋರಲಿ ಎಂದು ಆಶಿಸಿದರು.
ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ ತೆರವಿಗೆ SIT ರಚಿಸಿ ಆದೇಶ
ಈ ಸಂದರ್ಭದಲ್ಲಿ PSI ದಿಲೀಪ್ ಅವರು ಸಮೃದ್ಧ್ ಅವರಿಗೆ 10,000 ರೂ. ಮೌಲ್ಯದ ಫಾಸ್ಟ್ಟ್ರಾಕ್ ವಾಚ್ ಉಡುಗೊರೆಯಾಗಿ ನೀಡಿದರು. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: 10th ಪಾಸ್ ಆದವರಿಗೆ ಜಾಬ್ ಆಫರ್; 23.000 ಸಂಬಳ













