ಮೂಡಿಗೆರೆ: ಕಾಫಿ ಬೆಳೆಗಾರ, ಉದ್ಯಮಿ, ಸಮಾಜ ಸೇವಕ ನಾರ್ಬಾಟ್ ಸಾಲ್ದಾನ ನಿಧನ

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಫಿ ಬೆಳೆಗಾರರು, ಸಮಾಜ ಸೇವಕರು, ಉದ್ದಿಮೆದಾರರು, ಕಾಂಗ್ರೆಸ್ ಮುಖಂಡರು ಆದಂತಹ ಕುಂದೂರಿನ ಶ್ರೀ ನಾರ್ಭಟ್ ಸಾಲ್ದಾನ ನಿಧನ ಹೊಂದಿದ್ದಾರೆ.

 

ಇದನ್ನೂ ಓದಿ; ಬ್ಯೂರೋ ಆಫ್‌ ಇಂಡಿಯನ್ ಸ್ಟ್ಯಾಂಡರ್ಡ್‌ ನಲ್ಲಿ ಉದ್ಯೋಗಾವಕಾಶ; 107 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿಗೆ ಬೇಕಾದ ಡಿಟೈಲ್ಸ್ ಇಲ್ಲಿದೆ

ಇಂದು (ಶನಿವಾರ) ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಹೃದಯಾಘಾತವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ರವಾನಿಸುವ ದಾರಿ ಮಧ್ಯ ನಿಧನ ಹೊಂದಿದ್ದಾರೆ.

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌; ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ

ನಾರ್ಬಾಟ್ ಸಾಲ್ದಾನ ಅವರು ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಕಾಫಿ ಬೆಳೆಗಾರರಲ್ಲಿ ಒಬ್ಬರಾಗಿದ್ದರು. ರಾಜಕೀಯವಾಗಿ ಅವರು ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡು ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಮೂಡಿಗೆರೆ ಬೆಳೆಗಾರರ ಸಂಘದ ನಿರ್ದೇಶಕರಾಗಿದ್ದರು. ಕೊಡುಗೈ ದಾನಿಗಳಾಗಿದ್ದ ನಾರ್ಬಾಟ್ ಸಾಲ್ದಾನ ಬಣಕಲ್ ನಝರತ್ ಶಾಲೆಗೆ ಭೂಮಿ ದಾನ ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಗಳಿಗೆ, ಸಾಮಾಜಿಕ ಕಾರ್ಯಗಳಿಗೆ ಉದಾರವಾಗಿ ದಾನವನ್ನು ನೀಡಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)

 

ಶೃಂಗೇರಿ: ರಾಜ್ಯ ಸರ್ಕಾರಿ ನೌಕರರ ಸಂಘದ 2024 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕು ಘಟಕದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ಸಂಘ 2024 ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

 

ಇದನ್ನೂ ಓದಿ; ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?

ಬುಧವಾರ ತಾಲ್ಲೂಕು ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಶೃಂಗೇರಿ ತಾಲ್ಲೂಕು ತಹಸೀಲ್ದಾರ್ ಗೌರಮ್ಮ, ನೌಕರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನಾಯ್ಕ್ ಎಸ್, ಸಂಘದ ಕಾರ್ಯದರ್ಶಿ ಶಶಿಧರ್, ರಾಜ್ಯ ಪರಿಷತ್ ಸದಸ್ಯರಾದ ರವೀಂದ್ರ MB, ಖಜಾಂಚಿ ಸೋಮಯ್ಯ, ಉಪಾಧ್ಯಕ್ಷರಾದ ಅಬ್ದುಲ್ ಖಾದರ್, ವೆಂಕಟೇಶ್ BM, ಯಮನಪ್ಪ ತಳವಾರ್ ಹಾಗೂ ನಿರ್ದೇಶಕರಾದ ಅಶ್ವಿನಿ,ADLR ನಂದೀಶ್, ಶಿಕ್ಷಣ ಇಲಾಖೆಯ ಬಸವರಾಜ್, ಕೊಪ್ಪ ವಿಭಾಗದ ಮಾನ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ನಂದೀಶ್ CL, ತಾಲ್ಲೂಕು ವೈದ್ಯಾಧಿಕಾರಿಗಳಾದ ಆಡಿ ದಯಾನಂದ್, ವಲಯ ಅರಣ್ಯಧಿಕಾರಿಗಳಾದ ಅನಿಲ್ ಡಿಸೋಜಾ, ಜೂನಿಯರ್ ಕಾಲೇಜ್ ನ ಪ್ರಚಾರ್ಯರಾದ ಅರುಣ್ ಕುಮಾರ್ ಹಾಗೂ ತಾಲ್ಲೂಕು ಪಂಚಾಯ್ತಿಯ ಸಹಾಯಕ ನಿರ್ದೇಶಕರಾದ ಸುದೀಪ್ ಹಾಗೂ ತಾಲ್ಲೂಕಿನ ಎಲ್ಲಾ ಇಲಾಖೆಯ ನೌಕರರು ಇದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.