ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಸಾರಗೋಡು ಗ್ರಾಮದ ಹಲಸೂರು ಎಸ್ಟೇಟ್, ಬೀಡಿಕೆ ಎಸ್ಟೇಟ್ ಸೇರಿದಂತೆ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಏಳು ಕಾಡಾನೆಗಳು ಸಂಚರಿಸುತ್ತಾ ಜನರಲ್ಲಿ ಆತಂಕ ಮೂಡಿಸಿದೆ.
ಇದನ್ನೂ ಓದಿ; ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು

ಕೆಲ ದಿನಗಳಿಂದ ಆಲ್ದೂರು ಅರೇನೂರು ಭಾಗದಲ್ಲಿ ಸಂಚರಿಸುತ್ತಿದ್ದ ಕಾಡಾನೆಗಳ ಗುಂಪು ಈಗ ಸಾರಗೋಡು ಭಾಗಕ್ಕೆ ಆಗಮಿಸಿವೆ ಎನ್ನಲಾಗಿದೆ. ಈ ಗುಂಪಿನಲ್ಲಿ ಎರಡು ಮರಿಯಾನೆಗಳು ಇದೆ. ಆನೆಗಳು ತೋಟದಲ್ಲಿ ಕಾಫಿ, ಅಡಿಕೆ ಮರಗಳನ್ನು ನಾಶ ಮಾಡಿ, ರೈತರಿಗೆ ಅಪಾರ ಪ್ರಮಾಣದ ಹಾನಿ ಉಂಟುಮಾಡುತ್ತಿದೆ.

ಇದನ್ನೂ ಓದಿ; ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
ಇನ್ನು ಈ ಭಾಗದ ಜನರು ಹೊರಗೆ ತಿರುಗುವಾಗ ಜಾಗೃತೆ ವಹಿಸಬೇಕು ಎಂದು ಅರಣ್ಯ ಇಲಾಖೆಯವರು ಮುನ್ನೆಚ್ಚರಿಕೆ ನೀಡಿದ್ದಾರೆ.
ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ಹೆಚ್ಚುತ್ತಿರುವ ಅಪಘಾತ | ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೆಡ್ ಅಳವಡಿಕೆ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಉತ್ತಮ ಗುಣಮಟ್ಟದ ರಸ್ತೆಗಳಿದ್ದರೂ ಸಹ ಚಾರ್ಮಾಡಿ ಘಾಟಿಯಲ್ಲಿ ಮಂಜು ಕವಿದ ವಾತಾವರಣ ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸುವುದರ ಜೊತೆಗೆ ತಾಳ್ಮೆಯಿಂದ ವಾಹನ ಚಾಲನೆ ಮಾಡಬೇಕು ಎಂದು ಪಿ.ಎಸ್.ಐ ಜಂಬೂರಾಜ್ ಮಹಾಜನ್ ತಿಳಿಸಿದರು.
ಇದನ್ನೂ ಓದಿ; HSRP ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು HSRP? ಅಳವಡಿಕೆ ಹೇಗೆ?
ಶನಿವಾರ ಚಾರ್ಮಾಡಿ ಘಾಟಿಯಲ್ಲಿ ಬಣಕಲ್ ಠಾಣಾ ವ್ಯಾಪ್ತಿಯ ಪ್ರದೇಶಗಳಲ್ಲಿ ಅಪಘಾತ ತಡೆಗಟ್ಟಲು ಬ್ಯಾರಿಕೆಡ್ ಗಳನ್ನು ಅಳವಡಿಸಲಾಯಿತು. ಯುವಕರು ರಸ್ತೆ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ಚಾರ್ಮಾಡಿ ಘಾಟಿಯ ತಿರುವಿನ ಬಳಿ ರಸ್ತೆ ಬದಿಯ ಮೋರಿಗಳು ಬಿರುಕು ಬಿಟ್ಟಿದೆ. ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿಕೆಡ್ ಅಳವಡಿಸಿ, ಮುಂಜಾಗ್ರತಾ ಕ್ರಮವನ್ನು ಬಣಕಲ್ ಪೊಲೀಸರು ಕೈಗೊಂಡರು. ಬಸ್ ಲಾರಿ ಮೊದಲಾದ ಘನ ವಾಹನಗಳು ಸಂಚರಿಸುವಾಗ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಪೊಲೀಸರು ತಿಳಿಸಿದರು.
ಈ ಸಂದರ್ಭದಲ್ಲಿ ಬಣಕಲ್ ಠಾಣೆಯ ಎ.ಎಸ್.ಐ ಶಶಿ, ಜಗದೀಶ್, ಸಿಬ್ಬಂದಿ ವರ್ಗದವರು ಹಾಜರಿದ್ದರು.
ಇದನ್ನೂ ಓದಿ; ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ













