
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ತಮ್ಮನ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಕನ ಕುಟುಂಬಕ್ಕೆ ಗ್ರಾಮದಲ್ಲಿರುವ ಕೆಲ ಮುಖಂಡರು ಬಹಿಷ್ಕಾರ ಹಾಕಿದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಡೆದಿದೆ.
ಇದನ್ನೂ ಓದಿ; ರೈತ ಸಿರಿ ಯೋಜನೆ; ಪ್ರತಿ ಹೆಕ್ಟೇರ್ ಗೆ 10,000 ಪ್ರೋತ್ಸಾಹ ಧನ; ಯೋಜನೆಯ ಉದ್ದೇಶ, ಅರ್ಹತೆ, ಬೇಕಾಗುವ ದಾಖಲೆ ಏನು?

ಎರಡು ವರ್ಷಗಳ ಹಿಂದೆ ಭೂಮಿ ಹುಣ್ಣಿಮೆ ದಿನ ಸೊರಬದ ಕುರುವಳ್ಳಿ ಗ್ರಾಮದಲ್ಲಿ ಅಪಘಾತ ನಡೆದು ಟಿವಿಎಸ್ ಸವಾರ ಮಂಜುನಾಥ್ ಸಾವನ್ನಪ್ಪಿದ್ದರು. ಆದರೆ ತನಿಖೆಯ ವೇಳೆ ಪ್ರಕರಣ ತಿರುವು ಪಡೆದು ಅದು ಅಪಘಾತವಲ್ಲ ಕೊಲೆ ಎಂಬುದು ಸಾಬೀತಾಗಿತ್ತು. ಪ್ರಕರಣದಲ್ಲಿ ಮಂಜುನಾಥ್ ಅಳಿಯ ಪ್ರವೀಣ್ ಶಿಕ್ಷೆಗೆ ಒಳಗಾಗಿದ್ದಾನೆ.

ಇದನ್ನೂ ಓದಿ; ಆನೆ ದಾಳಿ: ಕೇರಳ ವ್ಯಕ್ತಿಯ ಸಾವಿಗೆ ರಾಜ್ಯದಿಂದ ಪರಿಹಾರ; ರಾಜ್ಯ ಸರ್ಕಾರ ಮಾನ-ಮರ್ಯಾದೆ ಎಲ್ಲ ಬಿಟ್ಟಿದೆ
ಇದೇ ಘಟನೆಯನ್ನು ಮುಂದೆ ಇಟ್ಟುಕೊಂಡು ಗ್ರಾಮದಲ್ಲಿರುವ ಮುಖಂಡರು ಸರೋಜಮ್ಮಳ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ. ಮನೆಗೆ ನೀಡಿದ ವಿದ್ಯುತ್, ನೀರಿನ ಸಂಪರ್ಕ, ಯಾರು ಜೊತೆ ಮಾತನಾಡದಂತೆ ಯಾವುದೇ ಶುಭ ಕಾರ್ಯಗಳಿಗೆ ಇವರನ್ನು ಆಹ್ವಾನಿಸದಂತೆ ಮುಖಂಡರು ಸೂಚಿಸಿದ್ದಾರೆ. ಇವರ ಜೊತೆ ಯಾರಾದ್ರೂ ಮಾತನಾಡಿದ್ರೆ ಅವರಿಗೆ 1000 ಸಾವಿರ ದಂಡ ವಿಧಿಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರಂತೆ.
ಜಿಲ್ಲಾಧಿಕಾರಿಗಳಿಗೆ ಮನವಿ:
ಇದರಿಂದ ಕಂಗಾಲಾಗಿರುವ ಕುಟುಂಬವು ವಾಪಸ್ ತಮ್ಮ ಮನೆಗೆ ಹೋಗಿ ಬದುಕಬೇಕು. ಈ ಬಹಿಷ್ಕಾರದಿಂದ ತಮ್ಮನ್ನು ಮುಕ್ತಗೊಳಿಸಿ ಎಂದು ಶಿವಮೊಗ್ಗ ಡಿಸಿ ಗುರುದತ್ತ ಹೆಗ್ಗಡೆ ಅವರಿಗೆ ಸರೋಜಮ್ಮ ಮನವಿ ಮಾಡಿದ್ದಾಳೆ. ತಾಯಿಗೆ ಮಗಳು ಕೂಡಾ ಸಾಥ್ ಕೊಟ್ಟಿದ್ದಾರೆ.
ಸದ್ಯ ಈ ಬಹಿಷ್ಕಾರದಿಂದ ತಮ್ಮನ್ನು ರಕ್ಷಣೆ ಮಾಡಬೇಕೆಂದು ಡಿಸಿಗೆ ಮನವಿ ಮಾಡಿದ್ದಾರೆ. ಡಿಸಿ ಅವರು ತತಕ್ಷಣ ಸ್ಥಳೀಯ ಪೊಲೀಸರಿಗೆ ಮತ್ತು ತಹಸೀಲ್ದಾರ್ ಅವರಿಗೆ ಬಹಿಷ್ಕಾರ ಕುರಿತು ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಕುಟುಂಬಕ್ಕೆ ಬಹಿಷ್ಕಾರ ಹಾಕುವ ಕಾನೂನು ಹಕ್ಕು ಗ್ರಾಮಸ್ಥರಿಗೆ ಇಲ್ಲ. ಮಾನಸಿಕವಾಗಿ ಬಹಿಷ್ಕಾರದ ಅಸ್ತ್ರದ ಮೂಲಕ ಕುಟುಂಬಕ್ಕೆ ಚಿತ್ರಹಿಂಸೆ ನೀಡಲಾಗುತ್ತಿದೆ. ಸದ್ಯ ನೊಂದ ಕುಟುಂಬಸ್ಥರು ಶಿವಮೊಗ್ಗ ಡಿಸಿ ಕಚೇರಿ ಬಾಗಿಲು ತಟ್ಟಿದ್ದಾರೆ. ಈ ಬಹಿಷ್ಕಾರದಿಂದ ಕುಟುಂಬವನ್ನು ಮುಕ್ತಗೊಳಿಸುವುದಕ್ಕೆ ಡಿಸಿ ಏನೆಲ್ಲಾ ಕ್ರಮ ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಕೊಪ್ಪ: ಗ್ರಾಮ ಪಂಚಾಯಿತಿಯ ಹಾಲಿ ಸದಸ್ಯ ಮತ್ತು ಮಾಜಿ ಅಧ್ಯಕ್ಷರ ಸದಸ್ಯತ್ವ ವಜಾ!
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯ್ತಿ ಹಾಲಿ ಸದಸ್ಯ ಮತ್ತು ಮಾಜಿ ಅಧ್ಯಕ್ಷರನ್ನು 6 ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಇಲ್ಲಿನ ಹಾಲಿ ಸದಸ್ಯ ಮತ್ತು ಮಾಜಿ ಅಧ್ಯಕ್ಷರಾದ ಶಿವಾಕರ್ ಎಸ್ ಶೆಟ್ಟಿಯವರು ಕರ್ತವ್ಯ ಲೋಪ ಹಾಗೂ ಹಣ ದುರುಪಯೋಗ ಸಾಬೀತಾದ ಹಿನ್ನೆಲೆ ಚುನಾವಣೆಗೆ ನಿಲ್ಲದಂತೆ ನಿರ್ಬಂಧಿಸಿ ಆದೇಶ ಹೊರಡಿಸಿ ಸದಸ್ಯತ್ವ ವಜಾಗೊಳಿಸಲಾಗಿದೆ.
ಇದನ್ನೂ ಓದಿ; ಕರ್ನಾಟಕ ಸರ್ಕಾರದಿಂದ ಲ್ಯಾಪ್ ಟಾಪ್ ಭಾಗ್ಯ; ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಸಲ್ಲಿಸಿ
34 ಲಕ್ಷ ಹಣ ದುರಪಯೋಗ!
ಶಿವಾಕರ್ ಎಸ್ ಶೆಟ್ಟಿ ಶಾನುವಳ್ಳಿ ಗ್ರಾ.ಪಂ ಅಧ್ಯಕ್ಷರಾಗಿದ್ದ ಸಮಯದಲ್ಲಿ 2016-17ನೇ ಸಾಲಿನಲ್ಲಿ ಕೆಲ ಕಾಮಗಾರಿಗಳಿಗೆ ಕ್ರಿಯಾಯೋಜನೆ ತಯಾರಿಸದೇ, ಎಂ ಬಿ ದಾಖಲಿಸದೇ ಸರ್ಕಾರದ ಹಣವನ್ನು ಚೆಕ್ ಮೂಲಕ ನಗದೀಕರಿಸಿದ ಆರೋಪವನ್ನು ಎದುರಿಸುತ್ತಿದ್ದರು. ಇದೀಗ ಕರ್ತವ್ಯ ಲೋಪ ಮತ್ತು ಸುಮಾರು 34 ಲಕ್ಷ ರೂ. ಹಣ ದುರುಪಯೋಗ ಸಾಬೀತಾದ ಹಿನ್ನೆಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಆದೇಶ ಹೊರಡಿಸಿದ್ದಾರೆ.













