ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯು ತಿಳಿಸಿದೆ. ಈ ಸಂಬಂಧ ಇಲಾಖೆಯು ಯೆಲ್ಲೊ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ; ಗ್ರಾಮೀಣ ಕುಡಿಯುವ ನೀರು ಇಲಾಖೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಸುವುದು ಹೇಗೆ?,ಕೊನೆಯ ದಿನಾಂಕ ಯಾವಾಗ?

ಚಿಕ್ಕಮಗಳೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗೆ ಶನಿವಾರ ಯೆಲ್ಲೊ ಅಲರ್ಟ್ ಘೋಷಿಸಿದೆ. ಕೊಡಗು ಜಿಲ್ಲೆಗೆ ಶುಕ್ರವಾರ ಹಾಗೂ ಮೈಸೂರು, ಹಾಸನ ಐದು ಜಿಲ್ಲೆಗಳಿಗೆ ಭಾನುವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಶನಿವಾರದಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವೆಡೆ ಮಳೆ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಶುಕ್ರವಾರ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ; ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಕೊಪ್ಪ: ಆಡಳಿತ ವೈದ್ಯಾಧಿಕಾರಿ ಹುದ್ದೆಯಿಂದ ಡಾಕ್ಟರ್ ಗಾನವಿ ತೆರವಿಗೆ ಸೂಚನೆ
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ನೀಡಿರುವ ದೂರಿನ್ವಯ ಕೊಪ್ಪ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಅಧಿಕಾರವನ್ನು ಹಿರಿಯ ತಜ್ಞರಿಗೆ ವಹಿಸುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಸಾಮಾನ್ಯವಾಗಿ ಸರ್ಕಾರ ಸುತ್ತೋಲೆಯ ಪ್ರಕಾರ ಆಸ್ಪತ್ರೆಯ ಆಡಳಿತಾಧಿಕಾರಿ ಹುದ್ದೆಯನ್ನು ಎಮ್.ಬಿ.ಬಿ.ಎಸ್ ವೈದ್ಯರಿಗೆ ನೀಡಬೇಕಾಗಿತ್ತು. ಆದರೆ ಕೊಪ್ಪ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಗಾನವಿ ಅವರು ದಂತ ವೈದ್ಯರಾಗಿದ್ದ ಅವರಿಗೆ (ಎಮ್.ಡಿ.ಎಸ್)(Master of Dental Surgery) ಕೂಡ ಆಡಳಿತಾಧಿಕಾರಿ ಹುದ್ದೆ ನೀಡಲಾಗಿತ್ತು. ಆಸ್ಪತ್ರೆಯ ಹಿರಿಯ ತಜ್ಞರಿಗೆ ಈ ಆಡಳಿತಾಧಿಕಾರಿ ಹುದ್ದೆ ನೀಡುವಂತದ್ದು, ಆದರೆ ಪ್ರಭಾವಿ ನಾಯಕರುಗಳಿಂದ ಡಾ. ಗಾನವಿ ಅವರಿಗೆ ಆಡಳಿತಾಧಿಕಾರಿ ಹುದ್ದೆ ನೀಡಿದ್ದಾರೆ ಎಂಬ ಆರೋಪಗಳು ಕೂಡ ಕೇಳಿ ಬಂದಿದ್ದವು.
ಕಳೆದ ಆರು ತಿಂಗಳಿನಿಂದ ಆಸ್ಪತ್ರೆಯ ಇಬ್ಬರು ಹಿರಿಯ ವೈದ್ಯರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ನನಗೆ ಅಧಿಕಾರದ ಆಸೆ ಇಲ್ಲ. ಜನರ ಸೇವೆ ಮಾಡಬೇಕು ಎಂದು ಇಲ್ಲಿಗೆ ಬಂದಿದ್ದೇನೆ. ಡಾ. ವೆಂಕಟೇಶ್ ಈ ನಡುವೆ ಜಾತಿ ವಿಚಾರವನ್ನು ಮುಂದಿಟ್ಟುಕೊಂಡು, ನನಗೆ ಕೆಲಸ ಮಾಡಲು ಬಿಡುತ್ತಿಲ್ಲ. ವೈದ್ಯಕೀಯ ಕ್ಷೇತ್ರದಲ್ಲಿ ಜಾತಿ ತಂದಿರುವುದು ನನಗೆ ಬೇಸರ ಉಂಟುಮಾಡಿದೆ. ಹೀಗಾಗಿ ನನ್ನ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ಈಗಾಗಲೇ ತಿಳಿಸಿದ್ದೇನೆ. – ಡಾ. ಗಾನವಿ, ಆಡಳಿತ ವೈದ್ಯಾಧಿಕಾರಿ
ಡಾ: ಗಾನವಿ ಆಡಳಿತಾಧಿಕಾರಿಯಾಗಿ ಮುಂದುವರೆಸುವಂತೆ ಬ್ರಾಹ್ಮಣ ಮಹಾಸಭಾ ವತಿಯಿಂದ ಒತ್ತಾಯ:
ಕೊಪ್ಪ ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷರು ಮತ್ತು ಜಿಲ್ಲಾ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರು ಗುರುವಾರ ಕೊಪ್ಪದ ಗಾಯತ್ರಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಇತ್ತೀಚೆಗೆ ಬ್ರಾಹ್ಮಣರ ಮೇಲೆ ಆಗುತ್ತಿರುವ ದೌರ್ಜನ್ಯ ಮತ್ತು ಕಿರುಕುಳವನ್ನು ಖಂಡಿಸಿದರು.
ಕೊಪ್ಪ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿಯಾಗಿ ಕಳೆದ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿದ್ದಾರೆ. ಡಾ. ಗಾನವಿ ಅವರಿಗೆ ಇತ್ತೀಚಿನ ದಿನಗಳಲ್ಲಿ ಅವರು ಬ್ರಾಹ್ಮಣ ಮಹಿಳೆ ಎಂಬ ಏಕೈಕ ಕಾರಣದಿಂದ ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಬೇಸತ್ತು ಅವರು ತಮ್ಮ ಹುದ್ದೆ ಹಸ್ತಾಂತರಕ್ಕೆ ಮುಂದಾಗಿದ್ದು, ಇಂತಹ ಉತ್ತಮ ಸೇವೆ ನೀಡುತ್ತಿರುವ, ಆಸ್ಪತ್ರೆಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾದ ಇವರು ಈ ಹುದ್ದೆಯಲ್ಲಿ ಮುಂದುವರೆಯಲು ಸ್ಥಳೀಯ ಶಾಸಕರು ಮತ್ತು ಆಡಳಿತ ವರ್ಗ ಸಹಕಾರ ನೀಡಿ ಅವರ ಜೊತೆ ನಿಲ್ಲುವ ಅವಶ್ಯಕತೆ ಇದೆ ಎಂದು ಜಿಲ್ಲಾ ಬ್ರಾಹ್ಮಣ ಮಹಾ ಸಭಾದ ಉಪಾಧ್ಯಕ್ಷರಾದ ಡಾ. ಜಿ.ಎಸ್ ಮಹಾಬಲ ಅವರು ಮನವಿ ಮಾಡಿದರು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ- 01.11.2023
ವೈದ್ಯಕೀಯ ವೃತ್ತಿಯಲ್ಲಿ ನಿಸ್ವಾರ್ಥ ಸೇವೆಯ ಜೊತೆ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿಯಾಗಿ ಡಾ. ಗಾನವಿ ಅವರು ತಾಲ್ಲೂಕಿನಾದ್ಯಂತ ಉತ್ತಮ ಹೆಸರು ಮಾಡಿದ್ದು ಕೊಳೆತು ನಾರುತ್ತಿದ್ದ ಆಸ್ಪತ್ರೆಯನ್ನು ಉತ್ತಮ ಸ್ಥಿತಿಗೆ ತಂದಿರುತ್ತಾರೆ ಮತ್ತು ಕೊರೊನಾ ಸಂಧರ್ಭದಲ್ಲಿ ಇವರು ಮಾಡಿದ ನಿರ್ವಹಣೆಯ ಬಗ್ಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಶ್ಲಾಘನೆ ದೊರತು ಅತ್ಯುತ್ತಮ ಆಡಳಿತ ವೈಧ್ಯಾಧಿಕಾರಿ ಪ್ರಶಸ್ತಿ ಮತ್ತು ಅತ್ಯುತ್ತಮ ಆಸ್ಪತ್ರೆ ಪ್ರಶಸ್ತಿ ಸಹ ಬಂದಿರುತ್ತದೆ. ಇಂತಹ ಅಧಿಕಾರಿಗಳನ್ನು ಉಳಿಸಿಕೊಳ್ಳಲು ಶಾಸಕರು ಮುಂದಾಗಬೇಕು ಮತ್ತು ಬ್ರಾಹ್ಮಣಮಹಿಳೆ ಎಂಬ ಕಾರಣದಿಂದ ಇವರಿಗೆ ತೊಂದರೆ ಆಗುವುದನ್ನು ತಾಲ್ಲೂಕು ಬ್ರಾಹ್ಮಣ ಮಹಾಸಭಾ ಸಹಿಸುವುದಿಲ್ಲ ಎಂದು ಹೇಳಿದರು.
ಖಾಂಡ್ಯ ದೇವಸ್ಥಾನದ ಅರ್ಚಕರ ಮೇಲಿನ ಮೊಕದ್ದಮೆ ಹಿಂಪಡೆಯಲು ಆಗ್ರಹ:
ಇಡೀ ರಾಜ್ಯದಲ್ಲಿ ಸುದ್ದಿ ಆಗಿರುವ ಹುಲಿ ಉಗುರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಂಡ್ಯ ದೇವಸ್ಥಾನದ ಬಡ ಅರ್ಚಕರನ್ನು ಏಕಾಏಕಿ ಬಂದಿಸಿರುವುದನ್ನು ತಾಲ್ಲೂಕು ಬ್ರಾಹ್ಮಣ ಮಹಾಸಭಾ ಉಗ್ರವಾಗಿ ಖಂಡಿಸುತ್ತದೆ ಮತ್ತು ಅವರ ಮೇಲೆ ಹಾಕಿರುವ ಮೊಕದ್ದಮೆಯನ್ನು ಈ ಕೂಡಲೇ ವಾಪಸ್ ಪಡೆಯುವಂತೆ ಆಗ್ರಹಿಸುತ್ತದೆ ಎಂದರು. ಇಂತಹ ಪ್ರಕರಣಗಳಲ್ಲಿ ಮೊದಲಿಗೆ ತಿಳುವಳಿಕೆ ನೀಡಿ ನಂತರ ಕ್ರಮ ಕೈಗೊಳ್ಳಲು ನಮ್ಮ ಅಭ್ಯಂತರವಿಲ್ಲ. ಸೆಲೆಬ್ರಿಟಿಗಳಿಗೆ, ರಾಜಕಾರಣಿಗಳ ಮಕ್ಕಳಿಗೆ ಒಂದು ಕಾನೂನು, ಬಡ ಅರ್ಚಕರಿಗೆ ಬ್ರಾಹ್ಮಣರಿಗೆ ಒಂದು ಕಾನೂನು ಇದು ಯಾವ ನ್ಯಾಯ ಇದರ ಬಗ್ಗೆ ಶೀಘ್ರದಲ್ಲಿ ಬ್ರಾಹ್ಮಣ ಮಹಾಸಭೆಯ ವತಿಯಿಂದ ಉಗ್ರ ಪ್ರತಿಭಟನೆ ಮತ್ತು ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಇನ್ನು ಪತ್ರಿಕಾ ಗೋಷ್ಠಿಯಲ್ಲಿ ಕೊಪ್ಪ ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಕೆಸಕುಡಿಗೆ ಕೃಷ್ಣ ಮೂರ್ತಿ, ಕಾರ್ಯದರ್ಶಿಗಳಾದ ಕೆ .ಎಸ್ ಸುಬ್ರಹ್ಮಣ್ಯ, ನಿರ್ದೇಶಕರಾದ ಶ್ರೀ ದಿವಾಕರ್, ಮುಖಂಡರಾದ ಪ್ರಕಾಶ್ ಸಿ.ಹೆಚ್. ಶಶಿಕುಮಾರ್, ಪುರೋಹಿತ ಪರಿಷತ್ತಿನ ಶ್ರೀ ಕಾರ್ತೀಕೆಯ ಭಟ್ ಮತ್ತು ವಿಪ್ರನೌಕರ ಸಂಘದ ಅಧ್ಯಕ್ಷರಾದ ಶ್ರೀ ಶೃಂಗೇಶ್ವರ ಮತ್ತು ಗಣಪತಿ ಭಟ್ ಗುರುಪುರ ಅವರು ಉಪಸ್ಥಿತರಿದ್ದರು.













