ತರೀಕೆರೆ : ಭೀಮಾ ಕೋರೆಗಾಂವ್‌ ವಿಜಯೋತ್ಸವ ಆಚರಣೆ

ತರೀಕೆರೆ:  (ನ್ಯೂಸ್ ಮಲ್ನಾಡ್ ವರದಿ) ಕರಕುಚ್ಚಿ ಬಿ. ಕಾಲೊನಿ ಗ್ರಾಮದಲ್ಲಿ ವಿವಿಧ ದಲಿತ ಪರ ಸಂಘಟನೆಗಳಿಂದ ‘ಭೀಮಾ ಕೋರೆಗಾಂವ್ ವಿಜಯೋತ್ಸವ’ ಅಚರಿಸಲಾಯಿತು.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ಉಚಿತ ಚಿಕಿತ್ಸೆ ಯಾವ ಯೋಜನೆ? ಚಿಕಿತ್ಸಾ ವೆಚ್ಚ ಎಷ್ಟು?


ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಪಿ. ಕುಮಾರ್ ಮಾತನಾಡಿ, 1818ರ ಜ. 1ರಂದು ಸ್ವಾಭಿಮಾನಕ್ಕಾಗಿ ನಡೆದ ಈ ಯುದ್ಧದಲ್ಲಿ ಪೇಳ್ವೆಗಳ 25 ಸಾವಿರಕ್ಕೂ ಹೆಚ್ಚಿನ ಸೈನಿಕರನ್ನು ಕೇವಲ 500 ಜನ ಮಾಹರ್ ರೆಜಿಮೆಂಟ್ ಸೈನಿಕರು ಸೋಲಿಸಿದ್ದರು. ಇದರ ನೆನಪಿಗಾಗಿ ಈ ವಿಜಯೋತ್ರ ಆಚರಿಸುತ್ತಿರುವುದು ಸಂತಸದ ಸಂಗತಿ. ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದಿಂದ ನಾವೆಲ್ಲರೂ ಸಮಾನತೆಯಿಂದ ಬದುಕುತ್ತಿದ್ದೇವೆ’ ಎಂದರು.


ಇದನ್ನೂ ಓದಿ: ಶಿಕ್ಷಕರ ಗಮನಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅಧ್ಯಕ್ಷತೆ ವಹಿಸಿದ್ದ ಕೆ.ಎಲ್. ನಾಗರಾಜ್ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಸತ್ಪಪ್ರಜೆಗಳಾಗಿ ಬಾಳಬೇಕು ಎಂದರು.


ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ ಗೃಹಲಕ್ಷ್ಮಿ ಹಣದಲ್ಲಿ ಹೆಚ್ಚಳ..!


ಡಾ. ದೇವಿದಾಸ್, ನಿವೃತ್ತ ಉಪನ್ಯಾಸಕ ಶಿವಬಸಪ್ಪ, ಸುರೇಶ್, ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್, ಶ್ರೀನಿವಾಸ್, ಗೋವಿಂದಪ್ಪ, ರಮೇಶ್ ಇದ್ದರು. ಶಿಕ್ಷಕ ನಾಗೇಶ್ ಕ್ರಾಂತಿ ಗೀತೆಗಳನ್ನು ಹಾಡಿದರು.


ಇದನ್ನೂ ಓದಿ: 475 ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ ಸಂಬಳ ಎಷ್ಟು?, ಇಲ್ಲಿದೆ ಡಿಟೈಲ್ಸ್


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.