
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ರಾತ್ರಿ ಸಮಯದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಹಳ್ಳ, ಕೊಳ್ಳ, ಕೆರೆ-ಕಟ್ಟೆಗಳೆಲ್ಲ ತುಂಬಿ ಹರಿಯುತ್ತಿವೆ.
ಇದನ್ನೂ ಓದಿ: ಪಂಚಾಯಿತಿಯಲ್ಲೇ ಸಿಗಲಿವೆ ಜನನ-ಮರಣ ಪ್ರಮಾಣ ಪತ್ರ

ಲಕ್ಕವಳ್ಳಿ ಹೋಬಳಿ ಮಾಳಿಕೊಪ್ಪ ಗ್ರಾಮದ ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚಂದ್ರಪ್ಪ ಎಂಬ ರೈತನ ಕೊಟ್ಟಿಗೆ ಸಂಪೂರ್ಣ ಕುಸಿದು ಬಿದ್ದು, ಹಾಲು ಕೊಡುವ ಒಂದು ಜಾನುವಾರು ಮೃತಪಟ್ಟಿದ್ದು, ಇನ್ನೊಂದು ಜಾನುವಾರು ಮೇಲೆ ಚಪ್ಪಡಿ ಕಲ್ಲು ಬಿದ್ದು ತೀವ್ರ ಸ್ವರೂಪ ಗಾಯದಿಂದ ಜೀವನ್ಮರಣದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ ಅನುಮತಿ
ಅದ್ದರಿಂದ ರೈತನ ಕುಟುಂಬಕ್ಕೆ ಹಾಲು ಕೊಡುವ ಜಾನುವಾರು ಮೃತಪಟ್ಟಿದ್ದು, ಆದಾಯಕ್ಕೆ ತೊಂದರೆಯಾಗಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ನೀಡಲು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಎಲ್. ಟಿ. ಹೇಮಣ್ಣ ಮೂಲಕ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಗ್ರಾಪಂ ಸಿಬ್ಬಂದಿಗಳಿಗೆ ವೇತನ ಪಾವತಿ: ಮಹತ್ವದ ಆದೇಶ













