ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಮನೆ ಸಂಪೂರ್ಣ ನೆಲಸಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಬಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಿನ್ನೆ (ಮಂಗಳವಾರ) ನಡೆದಿದೆ.
ಇದನ್ನೂ ಓದಿ: KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ

ಮನೆ ಮಾಲೀಕ ಬಸಯ್ಯ ಹಿರೇಮಠ ಎಂಬವರು ಕೂಲಿ ಕೆಲಸಕ್ಕೆ ಹೋದ ವೇಳೆ ಈ ಘಟನೆ ನಡೆದ ಕಾರಣ ಭಾರೀ ಅನಾಹುತ ತಪ್ಪಿದೆ. ಆದರೆ, ಸಿಲಿಂಡರ್ ಸ್ಪೋಟಗೊಂಡ ರಭಸಕ್ಕೆ ಗುಡಿಸಲು ಸೇರಿದಂತೆ ವಸ್ತುಗಳು ಸುಟ್ಟು ಕರಕಲಾಗಿದೆ.


ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಏಕಾಂಗಿಯಾಗಿ ಬದುಕುತ್ತಿರುವ ಬಸಯ್ಯ, ಮನೆ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ. ಇದ್ದೊಂದು ಗುಡಿಸಲು ಬೆಂಕಿಗಾಹುತಿಯಾಗಿದ್ದರಿಂದ ಅವರಿಗೆ ಮಲಗೋಕು ಜಾಗ ಇಲ್ಲದಂತಾಗಿದೆ.
ಬಾಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: 3 ಮದ್ಯದ ಬಾಟಲ್ ಖರೀದಿಸಿದ್ರೆ 1 ಫ್ರೀ; ಹೊಸ ವರ್ಷದ ಆಫರ್, ಯಾರಿಗುಂಟು ಯಾರಿಗಿಲ್ಲ!













