
ಆಗುಂಬೆ; (ನ್ಯೂಸ್ ಮಲ್ನಾಡ್ ವರದಿ) ಕಳೆದ ತಿಂಗಳ ಹಿಂದೆ ಆಗುಂಬೆಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಸಂಬಂಧ ಯುವತಿಯ ಸಹೋದರ ನೀಡಿರುವ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ;
ಕಾಪುವಿನ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಒಂದು ತಿಂಗಳ ಹಿಂದೆ ಬೈಕ್ ನಲ್ಲಿ ಆಗುಂಬೆಯ ಜಲಪಾತಕ್ಕೆ ಸುತ್ತಾಡಲು ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದ ವಿದ್ಯಾರ್ಥಿಗಳ ಬೈಕ್ ಅನ್ನು ತಡೆದು ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿ ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ. ಇದೇ ವೇಳೆ ಕೆಲ ಯುವಕರು ವಿದ್ಯಾರ್ಥಿ, ವಿದ್ಯಾರ್ಥಿನಿಯ ವಿಡಿಯೋವನ್ನು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಣ ಮಾಡಿದ್ದರು. ಇದೀಗ ಈ ವಿಡಿಯೋವನ್ನು ತಿಂಗಳ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದರಿಂದ ಯುವತಿಯ ಸಹೋದರ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 21-09-2023
ನೈತಿಕ ಪೊಲೀಸ್ ಗಿರಿಯ ಮಾಡಿದವರ ವಿರುದ್ಧ ದೂರು ದಾಖಲು:
ಬೈಕ್ನಲ್ಲಿ ತೆರಳುತ್ತಿದ್ದ ಭಿನ್ನ ಸಮುದಾಯದ ಹುಡುಗ-ಹುಡುಗಿಯನ್ನು ಕೆಲವರು ತಡೆದು ವಿಡಿಯೋ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಸಹೋದರನ ದೂರಿನ ಮೇರೆಗೆ ಕಲಂ 143, 147, 341, 505(2) 354D r/w 149 IPC. ಪ್ರಕರಣ ದಾಖಲಾಗಿದೆ.
ಜನರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸಲು ಸೂಚನೆ ನೀಡಿದ ಸಿಎಂ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜನರ ಆಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆ.25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ರಜನೀಶ್ ಗೋಯೆಲ್ ಸುತ್ತೋಲೆ ಹೊರಡಿಸಿದ್ದಾರೆ. ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಟಾಚಾರಕ್ಕೆ ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುಬೇಕು. ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ ಕುರಿತು ಸೂಕ್ತ ಕ್ರಮವಹಿಸಬೇಕು ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸಾರ್ವಜನಿಕ ಹಾಗೂ ವೈಯಕ್ತಿಕ ಅರ್ಜಿಗಳನ್ನು ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಕಛೇರಿ ಮತ್ತು ತಾಲೂಕು ಪಂಚಾಯಿತಿ ಕಛೇರಿಗಳಲ್ಲಿ ದಿನಾಂಕ: 23-09-2023 ರ (ಶನಿವಾರ) ಸಂಜೆ 5.30 ರವರೆಗೆ ಸ್ವೀಕರಿಸಿ, ವೈಯಕ್ತಿಕ ಅರ್ಜಿಗಳನ್ನು ಮತ್ತು ಸಾರ್ವಜನಿಕವಾಗಿ ಸಲ್ಲಿಸುವ ಅರ್ಜಿಗಳನ್ನು ಪ್ರತ್ಯೇಕ ವಹಿಗಳಲ್ಲಿ ನೋಂದಾಯಿಸಿ ಹಾಗೂ ಸದರಿ ಅರ್ಜಿಗಳನ್ನು ಗಣಕೀಕರಣಗೊಳಿಸಿ ಸಂಬಂಧಪಟ್ಟ ಅರ್ಜಿದಾರರುಗಳಿಗೆ ಕ್ರ.ಸಂ. 1 ರಿಂದ ಟೋಕನ್ ಗಳನ್ನು ತಾಲ್ಲೂಕುವಾರು ನೀಡುತ್ತಾರೆ.
24-09-2023 (ಭಾನುವಾರ) ರಂದು ವೈಯಕ್ತಿಕ ಅರ್ಜಿಗಳನ್ನು ಇಲಾಖಾವಾರು ಯೋಜನ ನಂಬರ್ ನೊಂದಿಗೆ ಪ್ರತ್ಯೇಕಿಸಿ ಸಾರ್ವಜನಿಕವಾಗಿ ಬಂದ ಅರ್ಜಿಗಳನ್ನು ಇಲಾಖಾವಾರು ಟೋಕನ್ ನಂಬರ್ ನೊಂದಿಗೆ ಪ್ರತ್ಯೇಕಿಸಿ ಹಾಗೂ ಸ್ವೀಕೃತಗೊಂಡ ಅರ್ಜಿಗಳನ್ನು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ತರಲು ಸೂಚಿಸಿದ್ದಾರೆ.
25-09-2023 (ಸೋಮವಾರ) ರಂದು ನಡೆಯಲಿರುವ “ಜನತಾ ದರ್ಶನ” ಕಾರ್ಯಕ್ರಮಕ್ಕೆ ನುರಿತ ಕಂಪ್ಯೂಟರ್ ಅಪರೇಟರ್ ಮತ್ತು ಮೇಲುಸ್ತುವಾರಿಗೆ ಶಿರಸ್ತೇದಾರ್ ಮತ್ತು ತಾಲೂಕು ಪಂಚಾಯಿತಿಯಿಂದ ಸಹಾಯಕ ನಿರ್ದೇಶಕರು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬೆಳಿಗ್ಗೆ 6.00 ಗಂಟೆಗೆ ಹಾಜರಿದ್ದು, ತಮ್ಮ ತಾಲ್ಲೂಕಿಗೆ ಸಂಬಂಧಿಸಿದ ಕೌಂಟರ್ ಅನ್ನು ಪರಿಶೀಲಿಸಿಕೊಮಡು ಬೆಳಿಗ್ಗೆ 5 ಗಂಟೆಯಿಂದ ಕೌಂಟರ್ ನಲ್ಲಿ ತಮ್ಮ ತಾಲ್ಲೂಕಿಗೆ ಸಂಬಂಧಿಸಿದಂತೆ ಬರುವ – ಅರ್ಜಿಗಳನ್ನು ಸ್ವೀಕರಿಸಿ ನೋಂದಾಯಿಸಿ ಅರ್ಜಿದಾರರುಗಳಿಗೆ ಟೋಕನ್ ಗಳ ವಿತರಣೆ ಮಾಡಿ ಬಂದಂತಹ ಅರ್ಜಿಗಳನ್ನು ಇಲಾಖಾವಾರು ಪ್ರತ್ಯೆಕೀಸಿ ಕಾರ್ಯಕ್ರಮದಲ್ಲಿ ನೀಡಲು ತಿಳಿಸಿದ್ದಾರೆ.
ತಹಸೀಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಸ್ವೀಕೃತವಾಗಿರುವ ಅರ್ಜಿಗಳನ್ನು ಪರಿಶೀಲಿಸಿಕೊಂಡು ಪ್ರತ್ಯೇಕಿಸಿ ಕಾರ್ಯಕ್ರಮದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಕ್ರಮ ವಹಿಸಿ ಉಪವಿಭಾಗಾಧಿಕಾರಿಗಳು ತಮ್ಮ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳ ಉಸ್ತುವಾರಿಯನ್ನು ನೋಡಲು ಹಾಗೂ ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಕ್ರಮ ವಹಿಸಲು ಸೂಚಿಸಿದ್ದಾರೆ.
ಇನ್ನು ಮಾನ್ಯ ಮುಖ್ಯಮಂತ್ರಿಯವರ ನಿರ್ದೇಶನದಂತೆ ಇಂಧನ ಸಚಿವರು, ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ಜಿಲ್ಲೆಯ ಮಾನ್ಯ ಶಾಸಕರುಗಳ ಉಪಸ್ಥಿತಿಯಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು 25-09-2023 (ಸೋಮವಾರ) ಬೆಳಿಗ್ಗೆ 10.30 ಗಂಟೆಗೆ ಕ.ವಿ.ಪ್ರ.ನಿ.ನಿ.(ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ) ನೌಕರರ ಸಭಾ ಭವನ, ರತ್ನಗಿರಿ ರಸ್ತೆ, ಚಿಕ್ಕಮಗಳೂರು ಇಲ್ಲಿ ನಡೆಯಲಿದೆ.













