ಬೆಂಗಳೂರು/ತೀರ್ಥಹಳ್ಳಿ: ತೀರ್ಥಹಳ್ಳಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಕ್ಕಣ್ಣಗೌಡ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇದನ್ನೂ ಓದಿ; ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 2975 ಹುದ್ದೆ, 10th ವಿದ್ಯಾರ್ಹತೆ; ಈಗಲೇ ಅರ್ಜಿ ಸಲ್ಲಿಸಿ

ಮೂಲತಃ ಗದಗ ನಗರದವರಾದ ಜಕ್ಕಣಗೌಡರ್ ಮಂಗಳವಾರ ಇಲಾಖೆ ಕಾರ್ಯದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಕರೆ ಮಾಡಿದಾಗ ಸಂಪರ್ಕಕ್ಕೆ ಸಿಗದಿದ್ದಾಗ ಅನುಮಾನದಿಂದ ಅವರು ವಾಸ್ತವ್ಯ ಮಾಡಿದ್ದ ವಸತಿ ಗೃಹದ ಕೊಠಡಿಯನ್ನು ಪರಿಶೀಲಿಸಿದಾಗ ಮೃತಪಟ್ಟಿರುವುದು ತಿಳಿದಿದೆ.

ಇದನ್ನೂ ಓದಿ; ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಹೃದಯಾಘಾತದಿಂದ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಪ್ರಕರಣ ಕುರಿತು ಬೆಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗುರುವಾರ (ಇಂದು) ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವವನ್ನು ಕುಟುಂಬಸ್ಥರಿಗೆ ನೀಡಲಿದ್ದಾರೆ. ಆ ಬಳಿಕ ಗದಗದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಶಿವಮೊಗ್ಗ ಡಿಸಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?













