
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಳೆಗಾಗಿ ಮಲೆನಾಡಿನ ಜನರು ಹಿಂದಿನ ಸಂಪ್ರದಾಯಕ್ಕೆ ಮಾರು ಹೋಗುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಕೆಲವು ಗ್ರಾಮಗಳ ಜನತೆ ಹಿಂದಿನ ಸಂಪ್ರದಾಯ ಆಚರಣೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ; ಚಂದ್ರನ ಅಂಗಳಕ್ಕಿಳಿದ ರೋವರ್ ಪ್ರಜ್ಞಾನ್; ರೋವರ್ ಚಲನೆಯ ಮತ್ತೊಂದು ವಿಡಿಯೊವನ್ನು ಹಂಚಿಕೊಂಡ ಇಸ್ರೋ

ನರಸಿಂಹರಾಜಪುರ ತಾಲೂಕಿನ ಅಳೇಹಳ್ಳಿ, ಹೆನ್ನಂಗಿ, ಬೆಳ್ಳಂಗಿ ಗ್ರಾಮದ ಜನತೆ ಮಳೆಗಾಗಿ ಪ್ರಾರ್ಥಿಸಿ ಪರದೇಶಪ್ಪನ ಮಠದ ಗುರುಗಳ ನೇತೃತ್ವದಲ್ಲಿ ಗಂಗೇಗಿರಿ ಬೆಟ್ಟ ಹತ್ತುತ್ತಿದ್ದಾರೆ. ಕಳೆದ 37 ವರ್ಷಗಳ ಹಿಂದೆ ಇದೇ ರೀತಿ ಮಳೆ ಅಭಾವ ಉಂಟಾಗಿತ್ತು. ಬರದ ಛಾಯೆ ಮೂಡಿತ್ತು. ಇಂತಹ ವೇಳೆಯಲ್ಲಿ ಇಲ್ಲಿನ ಜನರು ಬೆಟ್ಟ ಹತ್ತಿ ದೇವರದಲ್ಲಿ ಪ್ರಾರ್ಥಿಸಿದ್ದರು. ಗಂಗೇಗಿರಿ ಬೆಟ್ಟ ಹತ್ತಿ ಅಲ್ಲಿ ಪೂಜೆ ಸಲ್ಲಿಸಿದರೇ ಮಳೆ ಬರುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆಯಾಗಿದೆ.

ಇದನ್ನೂ ಓದಿ; ಅರ್ನಬ್ ಗೋಸ್ವಾಮಿ ಪಾಲಾದ ಕನ್ನಡ ಖ್ಯಾತ ಸುದ್ದಿವಾಹಿನಿ; ದಿಗ್ವಿಜಯ ನ್ಯೂಸ್ ಇನ್ಮುಂದೆ ರಿಪಬ್ಲಿಕ್ ಕನ್ನಡ.. ಏನಿದು ಸುದ್ದಿ?
ಗಿರಿಯಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಕಳಸದಲ್ಲಿ ಅಲ್ಲಿನ ನೀರು ತಂದು, ಪೂಜೆ ಮಾಡಬೇಕು. 9 ದಿನಗಳ ಕಾಲ ಮಡಿಯಿಂದ ಇದ್ದು ಪೂಜೆ ಮಾಡಬೇಕು ಎಂಬ ಪ್ರತೀತಿ ಇದ್ದು, ಮಳೆಯಾಗುತ್ತದೆ ಎಂಬ ನಂಬಿಕೆ ಇದೆ. ಈ ನಿಟ್ಟಿನಲ್ಲಿ ಇಲ್ಲಿನ ಜನರು ಮಳೆಗಾಗಿ ಪ್ರಾರ್ಥಿಸಿ ಬೆಟ್ಟ ಏರುತ್ತಿದ್ದಾರೆ. ಈ ವರ್ಷ ಮಳೆ ಕೈಕೊಟ್ಟಿದೆ. ಮಲೆನಾಡಿನಲ್ಲೇ ಮಳೆ ಕೊರತೆ ಉಂಟಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ಬಿತ್ತಿದ ಬೆಳೆ ಕೈ ಸೇರುತ್ತೋ ಇಲ್ಲವೋ ಎಂಬ ಆತಂಕ ಮನೆ ಮಾಡಿದ್ದು, ಹಿಂದಿನ ಸಂಪ್ರದಾಯಗಳ ಕಡೆ ಮುಖ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಸಂಸದ ಸ್ಥಾನದಿಂದ ಅನರ್ಹ
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ (prajwal revanna disqualified:) ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ (prajwal revanna disqualified:) ಆದೇಶಿಸಿದೆ.
ಇದನ್ನೂ ಓದಿ; ಇನ್ಮುಂದೆ ಕಾಡಿನ ರಾಜ ಸಿಂಹ ಅಲ್ಲ..!; ಚಿರತೆಗೆ ಕಾಡಿನ ರಾಜನ ಪಟ್ಟ.. ಏನಿದು ಹೊಸ ಬೆಳವಣಿಗೆ
ಇನ್ನು ಸಂಸದ ಸ್ಥಾನ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರ ಸಿದ್ಧತೆ ನಡೆಸಿದ್ದಾರೆ.
ಇದನ್ನೂ ಓದಿ; ಕಾಫಿನಾಡ ಬರಕ್ಕೆ ಮತ್ತೊಬ್ಬ ರೈತ ಆತ್ಮಹತ್ಯೆ; ಎರಡು ದಿನದಲ್ಲಿ ಇಬ್ಬರು ರೈತರ ಆತ್ಮಹತ್ಯೆಗೆ ಶರಣು













