
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಬ್ಯಾಂಕಿಗೆ ಬಂದ ಮಹಿಳೆಯೊಬ್ಬರು ಅವಾಂತರ ಸೃಷ್ಟಿಮಾಡಿರುವ ಘಟನೆ ಒಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಬ್ಯಾಂಕಿಗೆ ಬಂದ ಮಹಿಳೆಯೊಬ್ಬರು 20 ಸಾವಿರ ರೂ. ಹಣ ನೀಡುವಂತೆ ಪಟ್ಟು ಹಿಡಿದು ಸತತ ಮೂರು ಗಂಟೆ ಮೈ ಮೇಲೆ ದೇವರು ಬಂದಿದೆ ಎಂದು ರಂಪಾಟ ಮಾಡಿದ್ದಾಳೆ.
ಇದನ್ನೂ ಓದಿ; ಕೊಪ್ಪ: 14 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಡೆತ್ ನೋಟ್ ನಲ್ಲಿ ಸಿಕ್ತು ಆಘಾತಕಾರಿ ಅಂಶ

20 ಸಾವಿರ ರೂ. ಚೆಕ್ ಕೊಟ್ಟು ರಂಪಾಟ:
ಬ್ಯಾಂಕ್ ಗೆ ಬಂದ ಮಹಿಳೆಯೊಬ್ಬರು 20 ಸಾವಿರ ರೂ. ಚೆಕ್ ಕೊಟ್ಟು, ಹಣ ನೀಡುವಂತೆ ತಿಳಿಸಿದ್ದಳು. ಬ್ಯಾಂಕ್ ಸಿಬ್ಬಂದಿ ಪರಿಶೀಲಿಸಿದಾಗ ಆಕೆಯ ಖಾತೆಯಲ್ಲಿ 2 ಸಾವಿರ ರೂ. ಮಾತ್ರ ಇದ್ದು, ಹಣ ನೀಡಲು ಬರುವುದಿಲ್ಲ ಎಂದು ತಿಳಿಸಿದ್ದರು. ಇದರಿಂದ ಆಕ್ರೋಶಗೊಂಡ ಮಹಿಳೆ ತನಗೆ 20 ಸಾವಿರ ರೂ. ಹಣ ಬೇಕೇಬೇಕು ಎಂದು ಪಟ್ಟು ಹಿಡಿದಿದ್ದಳು.

ಇದನ್ನೂ ಓದಿ; ಕಳ್ಳಸಾಗಣೆ ಮಾಡುತ್ತಿದ್ದ 4.8 ಕೋಟಿ ಮೌಲ್ಯ ಅಡಿಕೆ ವಶ
ಮಹಿಳೆ ಮೈ ಮೇಲೆ ಬಂತು ದೇವರು:
ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಮಹಿಳೆ ಕೊನೆಗೆ ಕೂದಲು ಕೆದರಿಕೊಂಡು ಮೈ ಮೇಲೆ ದೇವರು ಬಂದಂತೆ ಆಡಲು ಶುರು ಮಾಡಿದಳು. ಇದರಿಂದ ಬ್ಯಾಂಕ್ ಸಿಬ್ಬಂದಿ ಮತ್ತು ಇತರೆ ಗ್ರಾಹಕರು ಆತಂಕಕ್ಕೀಡಾದರು. ಬ್ಯಾಂಕಿನ ಮಧ್ಯದಲ್ಲಿ ಚೇರ್ ಹಾಕಿ ಕುಳಿತುಕೊಂಡ ಮಹಿಳೆ, ‘ನಾನು ದೇವರು, ನನಗೆ ದುಡ್ಡು ಕೊಡಿ. ಈಗ ಹೊಟ್ಟೆ ಹಸಿವಾಗುತ್ತಿದೆ’ ಎಂದು ಮಾತನಾಡಲು ಆರಂಭಿಸಿದರು. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಬ್ಯಾಂಕಿಗೆ ದೌಡಾಯಿಸಿ ಮಹಿಳೆಯನ್ನು ಸಮಾಧಾನಿಸಿ ಕಳುಹಿಸಲು ಯತ್ನಿಸಿದರು. ಆದರೆ ತಾನು ದೇವರು ಎಂದು ಆಕೆ ತಿಳಿಸಿ ಬ್ಯಾಂಕಿನಲ್ಲಿ ಮತ್ತಷ್ಟು ಕೂಗಾಟ ಮಾಡಿದಳು. ಆಕೆಯ ಪರಿಸ್ಥಿತಿ ಗಮನಿಸಿದ ಪೊಲೀಸರು 500 ರೂ. ಹಣ ನೀಡಲು ಮುಂದಾದರು. ಆಗ ಆಕೆ “ಇದು 500 ರೂ. ನನಗೆ 20 ಸಾವಿರ ರೂ. ಹಣ ಬೇಕು” ಎಂದು ಹಠ ಹಿಡಿದಳು.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಅಂತಿಮ ಪಟ್ಟಿ ಬಿಡುಗಡೆ; ಈ ಲಿಸ್ಟ್ ನಲ್ಲಿ ಹೆಸರಿದ್ದರೆ ಮಾತ್ರ ನಿಮ್ಮ ಖಾತೆಗೆ ಹಣ
ನಂತರ ಮಹಿಳೆಯ ತಾಯಿಯನ್ನು ಬ್ಯಾಂಕಿಗೆ ಕರಿಸಿದ ಪೊಲೀಸರು ಆಕೆಯನ್ನು ಸಮಾಧಾನಪಡಿಸಿದರು. ಮಹಿಳೆಯ ಅಸಹಾಯಕತೆ ಕಂಡು ಎಎಸ್ಐ ನಂಜುಂಡಪ್ಪ 500 ರೂ. ನೀಡಿ ಕಳುಹಿಸಿದರು. ಮಹಿಳೆ ಹೊರ ನಡೆಯುತ್ತಿದ್ದಂತೆ ಬ್ಯಾಂಕ್ ಸಿಬ್ಬಂದಿ ನಿಟ್ಟುಸಿರು ಬಿಟ್ಟರು.
ಇದನ್ನೂ ಓದಿ; ಜಲಪಾತ ಸಿನಿಮಾದಲ್ಲಿ ಅಭಿನಯಿಸಿರುವ ಪ್ರಮೋದ್ ಅವರ ಲುಕ್ ರಿವಿಲ್; ಪೋಸ್ಟರ್ ನೋಡಿ ಫೀದಾ ಆದ ಪ್ರಮೋದ್ ಧರ್ಮಪತ್ನಿ
ಕೊಪ್ಪ: 14 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಡೆತ್ ನೋಟ್ ನಲ್ಲಿ ಸಿಕ್ತು ಆಘಾತಕಾರಿ ಅಂಶ
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಇಲ್ಲಿನ ಪಟ್ಟಣದ ಬಿಜಿಎಸ್ (ವೆಂಕಟೇಶ್ವರ ವಿದ್ಯಾ ಮಂದಿರ) ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ.
ಡೆತ್ ನೋಟ್ ನಲ್ಲಿ ಬಯಲಾಯ್ತು ಸತ್ಯ;
ಕೇವಲ 750 ರೂ. ಸಾಲಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಹಿರೇಬಳ್ಳೇಕೆರೆ ಮೂಲದ ವಿದ್ಯಾರ್ಥಿ ಶ್ರೀನಿವಾಸ್ ಆಗಸ್ಟ್ 22ರಂದು ಹಾಸ್ಟೆಲ್ ನಲ್ಲಿ ನೇಣುಬಿಗಿದುಕೊಂಡಿದ್ದ. ಆದರೆ ಇದೀಗ ವಿದ್ಯಾರ್ಥಿ ಬರೆದಿಟ್ಟಿದ್ದ ಡೆತ್ ನೋಟ್ ವೈರಲ್ ಆಗಿವೆ. ಡೆತ್ ನೋಟ್ ಪ್ರಕಾರ ಆತ 750 ರೂ. ಸಾಲ ತೆಗೆದುಕೊಂಡಿದ್ದು ಆತ 3000 ವಾಪಾಸ್ ಕೇಳಿದ್ದಾನೆ. ಇದರಿಂದ ಮಾನಸಿಕ ಒತ್ತಡಕ್ಕೊಳಗಾದ ಶ್ರೀನಿವಾಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಡೆತ್ ನೋಟ್ ನಲ್ಲಿ ಏನಿದೆ?
ಇದೀಗ ವೈರಲ್ ಆಗಿರುವ ಡೆತ್ ನೋಟ್ ನಲ್ಲಿ ‘ನನ್ನ ಸಾವಿಗೆ ಕಾರಣ ಇಬ್ಬರು ವ್ಯಕ್ತಿಗಳು ಕಾರಣ ಎಂದು ಬರೆದುಕೊಂಡಿದ್ದಾನೆ ಎನ್ನಲಾಗಿದೆ.
ಮಗನ ಸಾವಿಗೆ ನ್ಯಾಯ ನ್ಯಾಯ ಕೊಡಿಸಿ ಎಂದು ತಂದೆ ಕಣ್ಣೀರು;
ಮೃತ ವಿದ್ಯಾರ್ಥಿ ಶ್ರೀನಿವಾಸ್ ಅವರ ತಂದೆ ರಮೇಶ್ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಸದ್ಯ ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ತನ್ನ ಮಗನ ಡೆತ್ ನೋಟ್ ನೋಡಿ ಕಣ್ಣೀರಿಟ್ಟಿರುವ ರಮೇಶ್, ಮಗನ ಸಾವಿನ ಕುರಿತು ಅನುಮಾನ ವ್ಯಕ್ಯಪಡಿಸಿದ್ದಾರೆ. ಈ ರೀತಿಯ ಸಾವು ಮುಂದೆ ಯಾವ ವಿದ್ಯಾರ್ಥಿಗೂ ಬಾರದಿರಲಿ ಎಂದು ಹೇಳಿದ್ದಾರೆ. ಮಗನ ಕುರಿತಂತೆ ಸಾಕಷ್ಟು ಕನಸು ಕಟ್ಟಿಕೊಂಡಿದ್ದ ಪೊಷಕರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.













